Advertisement
ಸುದ್ದಿಗಳು

ಪ್ಲಾಸ್ಟಿಕ್ ದುಷ್ಪರಿಣಾಮದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

Share

ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ 2016ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರಲ್ಲಿ ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಚಾಚು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರು.

ಅವರು ಸೋಮವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರಂತೆ ಪ್ಲಾಸ್ಟಿಕ್ ಧ್ವಜಗಳು, ಕ್ಯಾಂಡಿಸ್ಟಿಕ್‍ಗಳು, ಐಸ್‍ಕ್ರೀಮ್ ಸ್ಟಿಕ್‍ಗಳು, ಪ್ಲೇಟ್‍ಗಳು, ಕಪ್‍ಗಳು, ಚಮಚಗಳು, ಫೋರ್ಕ್‍ಗಳು, ಟ್ರೇಗಳು, ಸ್ವೀಟ್ ಬಾಕ್ಸ್, ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇತ್ಯಾದಿಗಳನ್ನು ಅವುಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದವರು ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ನಿಷೇಧಿತ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರಾದ ವೇದವ್ಯಾಸ್ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಪರಿಸರ ಇಲಾಖೆ ಅಧಿಕಾರಿ ಕೀರ್ತಿ ಕುಮಾರ್, ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು, ಮಾರಾಟಗಾರರಾದ ಸಂದೀಪ್ ಶೆಣೈ, ವಚನ್ ಶೆಟ್ಟಿ ಹಾಗೂ ಇತರರು ಸಭೆಯಲ್ಲಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

6 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

6 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

14 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

14 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago