ಕೃಷಿ

#Agriculture | ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ | ನೈಸರ್ಗಿಕವಾಗಿ ಭೂಮಿಯಲ್ಲೇ ಇದೆ ಅತೀ ಹೆಚ್ಚು ಪೋಷಕಾಂಶ ಪೊಟ್ಯಾಷ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಹಿರಿಯರು ಮಾಡುತ್ತಿದ್ದ ನೈಸರ್ಗಿಕ ಕೃಷಿಯನ್ನು #NaturalFarming  ಬಿಟ್ಟು ಇಂದಿನ ಜನಾಂಗ ಬಹಳ ಮುಂದೆ ಸಾಗಿ ಬಂದಾಗಿದೆ. ಪ್ರಕೃತಿ, ಪ್ರಾಣಿ-ಪಕ್ಷಿಗಳು, ನಾವು ಎಲ್ಲರೂ ಇದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಮರಳಿ ಮತ್ತೆ ಹಿಂದಕ್ಕೆ ಸಾಗೋಣ ಅನ್ನುವ ಮಾತುಗಳು ಕೇಳಿ ಬರುತ್ತಿವೆ, ಹಾಗೆ ಕೆಲವರು ಮತ್ತೆ ನಮ್ಮ ಸಾಂಪ್ರದಾಯಿಕ ಕೃಷಿಯತ್ತ ಹೊರಳುತ್ತಿದ್ದಾರೆ ಕೂಡ. ನಮ್ಮ ಭೂಮಿ ಮಾನವನ ಅನುಕೂಲಕ್ಕೆ ಹೇಗೆ ಬೇಕೋ ಹಾಗೆ ರಚನೆಯಾಗಿದೆ. ಆದರೆ ಅದನ್ನು ಬದಲಿಸಲು ಹೊರಟವರು ನಾವು. ಈ ಬಗ್ಗೆ ಅನೇಕ ತಿಳಿದ ಮಹನೀಯರು ಎಚ್ಚರಿಕೆ ನೀಡುತ್ತಿದ್ದಾರೆ.

Advertisement
Advertisement

ಕೃಷಿಗೆ ಬೇಕಾದ ಪೋಷಕಾಂಶಗಳನ್ನು ಭೂಮಿ ತಾಯಿಯೇ ತನ್ನ ಒಡಲಲ್ಲಿ ಹುದುಗಿಟ್ಟುಕೊಂಡಿದ್ದಾಳೆ. ಅದನ್ನು ನಾವು ತಿಳಿದುಕೊಳ್ಳಬೇಕು. ಈ ಬಗ್ಗೆ ಒಂದಷ್ಟು ಮಾಹಿತಿಯನ್ನು  ರೋಹಿಣಿ ಬಯೋಟೆಕ್ ನ ಡಾ ಮಲ್ಲಪ್ಪ ವಾಯ್ ಕಟ್ಟಿ ಅವರು ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ…

ನಮ್ಮ ಕೃಷಿ ಬೆಳೆಗಳಿಗೆ ನೈಸರ್ಗಿಕವಾಗಿ ಭೂಮಿಯಿಂದ ಅತೀ ಹೆಚ್ಚು ಸಿಗುವ ಪೋಷಕಾಂಶವೆಂದರೆ ಪೊಟ್ಯಾಶ್. ಒಂದು ಅಂದಾಜಿನ ಪ್ರಕಾರ ನಮ್ಮ ದೇಶದ ಕೃಷಿ ಭೂಮಿಯಲ್ಲಿ ಪ್ರತಿ ಹೆಕ್ಟೇರ್ ನಲ್ಲಿ 40 ರಿಂದ 60 ಟನ್ ಪೊಟ್ಯಾಶ್‌  ಲಭ್ಯವಿದ್ದು, ಅದು ಬಳಸಿದಂತೆಲ್ಲಾ ಮತ್ತೆ ಮತ್ತೆ ಪೊಟ್ಯಾಶ್ ಉತ್ಪತ್ತಿಯಾಗುತ್ತದೆ. ಅಂದರೆ ಮುಂದಿನ ಸಾವಿರಾರು ವರ್ಷ ನಾವು ರಾಸಾಯನಿಕ ಪೊಟ್ಯಾಶ್ ಬಳಸದೆ ಸಾಕಷ್ಟು ಇಳುವರಿ ಪಡೆಯಬಹುದು. ಆದರೆ ಪ್ರತಿ ಹಂತಗಳಲ್ಲಿ ಕೇವಲ 0.002%‌ ಪೊಟ್ಯಾಶ್ ಮಾತ್ರ ಕೆನೆಪದರಾಗಿ ಲಭ್ಯ ಪೊಟ್ಯಾಶ್ ರೂಪದಲ್ಲಿ(K2o) ಬೆಳೆಗಳಿಗೆ ಸಿಗುತ್ತದೆ. ಅದೂ ಭೂಮಿಯ ಭೌತಿಕ ರಚನೆ ಸರಿಯಾಗಿದ್ದು ತಟಸ್ಥ pH, ನಿಯಮಿತ ಪ್ರಮಾಣದ ಒಳಗೆ ಕ್ಲೋರೈಡ್ಸ ಇದ್ದರೆ ಮಾತ್ರ ಪೊಟ್ಯಾಶ್ ಲಭ್ಯ ರೂಪಕ್ಕೆ ಬರುತ್ತದೆ. ರಾಸಾಯನಿಕ ಗೊಬ್ಬರ ಬಳಕೆ ನಿಲ್ಲಿಸಿ ಕಲುಷಿತ ನೀರಿನ ಬದಲಾಗಿ ಸಾಧ್ಯವಾದಷ್ಟು ಮಳೆನೀರು ಸಂಗ್ರಹಿಸಿ ಬಳಸುವುದು.

ಸಸ್ಯ ತ್ಯಾಜ್ಯ, ಪಶುತ್ರ್ಯಾಜ್ಯ ಮುಂತಾದ ಸಾವಯವ ಗೊಬ್ಬರ (ಮಳ್ಳಿ ಗೊಬ್ಬರ ಅಲ್ಲಾ) ಬಳಸಿ ಪ್ರಾಚುರಿಯಿ ಅರಾಂಟ್ಸಾ ಎಂಬ ಪೊಟ್ಯಾಶ್ ಬಿಡುಗಡೆ ಮಾಡುವ ಅಣುಜೀವಿ ಸಂತತಿ ಹೆಚ್ಚಿಸಿ ಕೊರತೆಯಾಗಲಾರದಷ್ಟು ಪೊಟ್ಯಾಶ್ ಪಡೆಯಬಹುದು. ಈ ಪೊಟ್ಯಾಶ್ ಅಣುಜೀವಿಗಳ ಸಂಖ್ಯೆ ಹೆಚ್ಚಿದಂತೆ ಈ ಅಣುಜೀವಿಗಳ ಸ್ರವಿಸುವ ಗ್ಲೂಕೋನಿಕ್ ಆಸಿಡ್ ಕಠಿಣ ಪೊಟ್ಯಾಷನ್ನು ಲಭ್ಯ ಪೊಟ್ಯಾಷಾಗಿ ಪರಿವರ್ತಿಸುತ್ತದೆ.

ಇನ್ನು 150 ರಿಂದ 160 ಗ್ರಾಮ ತೂಕದ ಬಲಿತ ಬಾಳೆ ಹಣ್ಣಿನಲ್ಲಿ 280 ರಿಂದ 300 ಮಿಲಿ ಗ್ರಾಂ ನಷ್ಟು ಪೊಟ್ಯಾಶ್ ಸಿಗುತ್ತದೆ. ಹೂವು ಬೆಳವಣಿಯ ಹಂತದಲ್ಲಿಯೇ ಇರುವುದರಿಂದ ಇದರಲ್ಲಿ ಹೆಚ್ಚೆಂದರೆ 1 ಕೆಜಿಗೆ 85 mg ಪೊಟ್ಯಾಶ್ ಸಿಗುತ್ತದೆ. ಅದೇ ಕಂದುಗಳಲ್ಲಿ ಹೊಸ ಬೇರುಗಳ ಬೆಳವಣಿಗೆ ಅತಿ ಹೆಚ್ಚು ರಂಜಕವನ್ನು ಸಂಗ್ರಹಿಸುವುದರಿಂದ ಕಾಂಪೋಸ್ಚ ತಯಾರಿಸುವಾಗ ಕಂದುಗಳನ್ನು ಕತ್ತರಿಸಿ ಮಿಶ್ರಣ ಮಾಡುವುದರಿಂದ ಶಕ್ತಿಯುತ ಕಾಂಪೋಸ್ಚ ತಯಾರಿಸಿಕೊಳ್ಳಬಹುದು.

ನಾನಂತೂ ನಮ್ಮ ಭೂಮಿಯ ರಸಸಾರಕ್ಕೆ ಹೊಂದಿಕೊಳ್ಳುವಂತೆ ” ಫೋಟೊಮಿಕ್ ” ಹೆಸರಿನ ಪೊಟ್ಯಾಶ್ ಮೊಬಲೈಜರ ನ್ನು ನಮ್ಮದೇ ಲ್ಯಾಬನಲ್ಲಿ ಬೆಳೆಸಿ ಬಳಸುವುದರಿಂದ ಕಳೆದ 10 ವರ್ಷದಿಂದ ಹಿಡಿಯಷ್ಟೂ ರಾಸಾಯನಿಕ ರೂಪದ ಬಳಸಿಲ್ಲಾ. ಇದನ್ನು ನಿಮ್ಮಲ್ಲಿಯೇ ತಯಾರಿಕೊಳ್ಳಬಹುದು.

Advertisement

ಹೆಚ್ಚಿನ ಮಾಹಿತಿಗೆ:  ಡಾ ಮಲ್ಲಪ್ಪ ವಾಯ್ ಕಟ್ಟಿ, ರೊಹಿಣಿ ಬಯೋಟೆಕ್, ಮಹಾಲಿಂಗಪೂರ,  9845553416

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

2 hours ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

21 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

22 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

23 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago