Advertisement
ಕೃಷಿ

#Agriculture | ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ | ನೈಸರ್ಗಿಕವಾಗಿ ಭೂಮಿಯಲ್ಲೇ ಇದೆ ಅತೀ ಹೆಚ್ಚು ಪೋಷಕಾಂಶ ಪೊಟ್ಯಾಷ್ |

Share

ನಮ್ಮ ಹಿರಿಯರು ಮಾಡುತ್ತಿದ್ದ ನೈಸರ್ಗಿಕ ಕೃಷಿಯನ್ನು #NaturalFarming  ಬಿಟ್ಟು ಇಂದಿನ ಜನಾಂಗ ಬಹಳ ಮುಂದೆ ಸಾಗಿ ಬಂದಾಗಿದೆ. ಪ್ರಕೃತಿ, ಪ್ರಾಣಿ-ಪಕ್ಷಿಗಳು, ನಾವು ಎಲ್ಲರೂ ಇದರ ಪರಿಣಾಮವನ್ನು ಎದುರಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಮರಳಿ ಮತ್ತೆ ಹಿಂದಕ್ಕೆ ಸಾಗೋಣ ಅನ್ನುವ ಮಾತುಗಳು ಕೇಳಿ ಬರುತ್ತಿವೆ, ಹಾಗೆ ಕೆಲವರು ಮತ್ತೆ ನಮ್ಮ ಸಾಂಪ್ರದಾಯಿಕ ಕೃಷಿಯತ್ತ ಹೊರಳುತ್ತಿದ್ದಾರೆ ಕೂಡ. ನಮ್ಮ ಭೂಮಿ ಮಾನವನ ಅನುಕೂಲಕ್ಕೆ ಹೇಗೆ ಬೇಕೋ ಹಾಗೆ ರಚನೆಯಾಗಿದೆ. ಆದರೆ ಅದನ್ನು ಬದಲಿಸಲು ಹೊರಟವರು ನಾವು. ಈ ಬಗ್ಗೆ ಅನೇಕ ತಿಳಿದ ಮಹನೀಯರು ಎಚ್ಚರಿಕೆ ನೀಡುತ್ತಿದ್ದಾರೆ.

ಕೃಷಿಗೆ ಬೇಕಾದ ಪೋಷಕಾಂಶಗಳನ್ನು ಭೂಮಿ ತಾಯಿಯೇ ತನ್ನ ಒಡಲಲ್ಲಿ ಹುದುಗಿಟ್ಟುಕೊಂಡಿದ್ದಾಳೆ. ಅದನ್ನು ನಾವು ತಿಳಿದುಕೊಳ್ಳಬೇಕು. ಈ ಬಗ್ಗೆ ಒಂದಷ್ಟು ಮಾಹಿತಿಯನ್ನು  ರೋಹಿಣಿ ಬಯೋಟೆಕ್ ನ ಡಾ ಮಲ್ಲಪ್ಪ ವಾಯ್ ಕಟ್ಟಿ ಅವರು ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ…

ನಮ್ಮ ಕೃಷಿ ಬೆಳೆಗಳಿಗೆ ನೈಸರ್ಗಿಕವಾಗಿ ಭೂಮಿಯಿಂದ ಅತೀ ಹೆಚ್ಚು ಸಿಗುವ ಪೋಷಕಾಂಶವೆಂದರೆ ಪೊಟ್ಯಾಶ್. ಒಂದು ಅಂದಾಜಿನ ಪ್ರಕಾರ ನಮ್ಮ ದೇಶದ ಕೃಷಿ ಭೂಮಿಯಲ್ಲಿ ಪ್ರತಿ ಹೆಕ್ಟೇರ್ ನಲ್ಲಿ 40 ರಿಂದ 60 ಟನ್ ಪೊಟ್ಯಾಶ್‌  ಲಭ್ಯವಿದ್ದು, ಅದು ಬಳಸಿದಂತೆಲ್ಲಾ ಮತ್ತೆ ಮತ್ತೆ ಪೊಟ್ಯಾಶ್ ಉತ್ಪತ್ತಿಯಾಗುತ್ತದೆ. ಅಂದರೆ ಮುಂದಿನ ಸಾವಿರಾರು ವರ್ಷ ನಾವು ರಾಸಾಯನಿಕ ಪೊಟ್ಯಾಶ್ ಬಳಸದೆ ಸಾಕಷ್ಟು ಇಳುವರಿ ಪಡೆಯಬಹುದು. ಆದರೆ ಪ್ರತಿ ಹಂತಗಳಲ್ಲಿ ಕೇವಲ 0.002%‌ ಪೊಟ್ಯಾಶ್ ಮಾತ್ರ ಕೆನೆಪದರಾಗಿ ಲಭ್ಯ ಪೊಟ್ಯಾಶ್ ರೂಪದಲ್ಲಿ(K2o) ಬೆಳೆಗಳಿಗೆ ಸಿಗುತ್ತದೆ. ಅದೂ ಭೂಮಿಯ ಭೌತಿಕ ರಚನೆ ಸರಿಯಾಗಿದ್ದು ತಟಸ್ಥ pH, ನಿಯಮಿತ ಪ್ರಮಾಣದ ಒಳಗೆ ಕ್ಲೋರೈಡ್ಸ ಇದ್ದರೆ ಮಾತ್ರ ಪೊಟ್ಯಾಶ್ ಲಭ್ಯ ರೂಪಕ್ಕೆ ಬರುತ್ತದೆ. ರಾಸಾಯನಿಕ ಗೊಬ್ಬರ ಬಳಕೆ ನಿಲ್ಲಿಸಿ ಕಲುಷಿತ ನೀರಿನ ಬದಲಾಗಿ ಸಾಧ್ಯವಾದಷ್ಟು ಮಳೆನೀರು ಸಂಗ್ರಹಿಸಿ ಬಳಸುವುದು.

ಸಸ್ಯ ತ್ಯಾಜ್ಯ, ಪಶುತ್ರ್ಯಾಜ್ಯ ಮುಂತಾದ ಸಾವಯವ ಗೊಬ್ಬರ (ಮಳ್ಳಿ ಗೊಬ್ಬರ ಅಲ್ಲಾ) ಬಳಸಿ ಪ್ರಾಚುರಿಯಿ ಅರಾಂಟ್ಸಾ ಎಂಬ ಪೊಟ್ಯಾಶ್ ಬಿಡುಗಡೆ ಮಾಡುವ ಅಣುಜೀವಿ ಸಂತತಿ ಹೆಚ್ಚಿಸಿ ಕೊರತೆಯಾಗಲಾರದಷ್ಟು ಪೊಟ್ಯಾಶ್ ಪಡೆಯಬಹುದು. ಈ ಪೊಟ್ಯಾಶ್ ಅಣುಜೀವಿಗಳ ಸಂಖ್ಯೆ ಹೆಚ್ಚಿದಂತೆ ಈ ಅಣುಜೀವಿಗಳ ಸ್ರವಿಸುವ ಗ್ಲೂಕೋನಿಕ್ ಆಸಿಡ್ ಕಠಿಣ ಪೊಟ್ಯಾಷನ್ನು ಲಭ್ಯ ಪೊಟ್ಯಾಷಾಗಿ ಪರಿವರ್ತಿಸುತ್ತದೆ.

ಇನ್ನು 150 ರಿಂದ 160 ಗ್ರಾಮ ತೂಕದ ಬಲಿತ ಬಾಳೆ ಹಣ್ಣಿನಲ್ಲಿ 280 ರಿಂದ 300 ಮಿಲಿ ಗ್ರಾಂ ನಷ್ಟು ಪೊಟ್ಯಾಶ್ ಸಿಗುತ್ತದೆ. ಹೂವು ಬೆಳವಣಿಯ ಹಂತದಲ್ಲಿಯೇ ಇರುವುದರಿಂದ ಇದರಲ್ಲಿ ಹೆಚ್ಚೆಂದರೆ 1 ಕೆಜಿಗೆ 85 mg ಪೊಟ್ಯಾಶ್ ಸಿಗುತ್ತದೆ. ಅದೇ ಕಂದುಗಳಲ್ಲಿ ಹೊಸ ಬೇರುಗಳ ಬೆಳವಣಿಗೆ ಅತಿ ಹೆಚ್ಚು ರಂಜಕವನ್ನು ಸಂಗ್ರಹಿಸುವುದರಿಂದ ಕಾಂಪೋಸ್ಚ ತಯಾರಿಸುವಾಗ ಕಂದುಗಳನ್ನು ಕತ್ತರಿಸಿ ಮಿಶ್ರಣ ಮಾಡುವುದರಿಂದ ಶಕ್ತಿಯುತ ಕಾಂಪೋಸ್ಚ ತಯಾರಿಸಿಕೊಳ್ಳಬಹುದು.

ನಾನಂತೂ ನಮ್ಮ ಭೂಮಿಯ ರಸಸಾರಕ್ಕೆ ಹೊಂದಿಕೊಳ್ಳುವಂತೆ ” ಫೋಟೊಮಿಕ್ ” ಹೆಸರಿನ ಪೊಟ್ಯಾಶ್ ಮೊಬಲೈಜರ ನ್ನು ನಮ್ಮದೇ ಲ್ಯಾಬನಲ್ಲಿ ಬೆಳೆಸಿ ಬಳಸುವುದರಿಂದ ಕಳೆದ 10 ವರ್ಷದಿಂದ ಹಿಡಿಯಷ್ಟೂ ರಾಸಾಯನಿಕ ರೂಪದ ಬಳಸಿಲ್ಲಾ. ಇದನ್ನು ನಿಮ್ಮಲ್ಲಿಯೇ ತಯಾರಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ:  ಡಾ ಮಲ್ಲಪ್ಪ ವಾಯ್ ಕಟ್ಟಿ, ರೊಹಿಣಿ ಬಯೋಟೆಕ್, ಮಹಾಲಿಂಗಪೂರ,  9845553416

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

5 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

14 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

23 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago