Advertisement
MIRROR FOCUS

ಜಲಾಶಯಗಳಲ್ಲಿ ನೀರು ಶೇಖರಣೆ ಕುಸಿತ | ದಕ್ಷಿಣ ರಾಜ್ಯಗಳಲ್ಲಿ ಗಮನಾರ್ಹವಾಗಿ ನೀರಿನ ಕೊರತೆ | ಕೇಂದ್ರ ಜಲ ಆಯೋಗ ವರದಿ |

Share

ಭಾರತದ 150 ಪ್ರಾಥಮಿಕ ಜಲಾಶಯಗಳಲ್ಲಿ ಜಲ ಸಂಗ್ರಹಣಾ ಒಟ್ಟು ಸಾಮರ್ಥ್ಯದ ಶೇಕಡಾ 36 ರಷ್ಟು ಮಾತ್ರಾ ನೀರು ಇದೆ.  ಕರ್ನಾಟಕದಂತಹ ದಕ್ಷಿಣದ ರಾಜ್ಯಗಳು ಹಿಂದಿನ ವರ್ಷ ಮತ್ತು ಹಿಂದಿನ ಹತ್ತು ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹದಲ್ಲಿ ಗಮನಾರ್ಹ ಕೊರತೆಯನ್ನು ಎದುರಿಸುತ್ತಿವೆ ಎಂದು ಕೇಂದ್ರ ಜಲ ಆಯೋಗವು ತನ್ನ ಸಾಪ್ತಾಹಿಕ ಬುಲೆಟಿನ್‌ನಲ್ಲಿ ವರದಿ ಮಾಡಿದೆ.

ಬೆಂಗಳೂರಿನಂತಹ ನಗರಗಳು ನೀರಿನ ಕೊರತೆಯಿಂದ ಬಳಲುತ್ತಿವೆ, ಕಳೆದ ವರ್ಷದ ಮುಂಗಾರಿನಲ್ಲಿ ಕರ್ನಾಟಕದಲ್ಲಿ ಮಳೆ ಕೊರತೆ, ಜಲಾಶಯದ ನೀರಿನ ಮಟ್ಟದಲ್ಲಿನ ಕುಸಿತ ಮತ್ತು ತ್ವರಿತ ನಗರೀಕರಣದಿಂದ ಕೆರೆಗಳು ಬತ್ತಲು ಕಾರಣ ಎಂದು ಹೇಳಬಹುದು ಎಂದು ವರದಿಯಲ್ಲಿ ತಿಳಿಸಿದೆ.

ಕೇಂದ್ರ ಜಲ ಆಯೋಗವು ತನ್ನ ಸಾಪ್ತಾಹಿಕ ಬುಲೆಟಿನ್‌ನಲ್ಲಿ, 150 ಜಲಾಶಯಗಳ ಒಟ್ಟು ನೀರಿನ ಶೇಖರಣಾ ಸಾಮರ್ಥ್ಯ 178.784 ಬಿಪಿ (ಬಿಲಿಯನ್ ಕ್ಯೂಬಿಕ್ ಮೀಟರ್) ಆಗಿದೆ. ಆದರೆ ಈಗಿನ ಶೇಖರಣೆಯು  64.606 ಬಿಪಿ ಆಗಿದೆ. ಇದು ಈ ಜಲಾಶಯಗಳ ಶೇಖರಣಾ ಸಾಮರ್ಥ್ಯದ 36 ರಷ್ಟಾಗಿದೆ.

ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದಂತಹ ರಾಜ್ಯಗಳನ್ನು ಒಳಗೊಂಡಿರುವ ಉತ್ತರ ಪ್ರದೇಶದಲ್ಲಿ, ಒಟ್ಟು  ಸಂಗ್ರಹಣೆಯು ಅವುಗಳ ಒಟ್ಟು ಸಾಮರ್ಥ್ಯದ ಶೇಕಡಾ 32 ರಷ್ಟಿದೆ. ಈ ಅಂಕಿ ಅಂಶವು ಗಮನಿಸಿದರೆ, ಕಳೆದ ವರ್ಷದ  ಅವಧಿಯಲ್ಲಿ ಶೇಖರಣಾ ಮಟ್ಟಕ್ಕಿಂತ  ಕಡಿಮೆಯಾಗಿದೆ ಮತ್ತು ಹತ್ತು ವರ್ಷಗಳ ಸರಾಸರಿಗಿಂತ ಕಡಿಮೆಯಾಗಿದೆ. ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳು ಸೇರಿದಂತೆ ದಕ್ಷಿಣ ಪ್ರದೇಶವು ಹಿಂದಿನ ವರ್ಷ ಮತ್ತು ಹತ್ತು ವರ್ಷಗಳ ಸರಾಸರಿ ಎರಡಕ್ಕೂ ಹೋಲಿಸಿದರೆ ನೀರಿನ ಸಂಗ್ರಹಣೆಯಲ್ಲಿ ಗಮನಾರ್ಹ ಕೊರತೆಯನ್ನು ಎದುರಿಸುತ್ತಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹದಲ್ಲಿ ಕುಸಿತವನ್ನು ಎದುರಿಸುತ್ತಿವೆ. ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳನ್ನು ಒಳಗೊಂಡಿರುವ ಕೇಂದ್ರ ಪ್ರದೇಶವು ಹಿಂದಿನ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹದಲ್ಲಿ ಇಳಿಕೆ ಕಂಡಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದಂತಹ ರಾಜ್ಯಗಳನ್ನು ಒಳಗೊಂಡಿರುವ ಪೂರ್ವ ಪ್ರದೇಶವು ನೀರಿನ ಲಭ್ಯತೆ ಹೆಚ್ಚು ಹೊಂದಿದೆ.  ಜಲಾಶಯಗಳಲ್ಲಿ ಲಭ್ಯವಿರುವ ಒಟ್ಟು ನೇರ ಸಂಗ್ರಹಣೆಯು ಅವುಗಳ ಸಾಮರ್ಥ್ಯದ 47.49 ಪ್ರತಿಶತದಷ್ಟು ದಾಖಲಾಗಿದೆ, ಇದು ಹಿಂದಿನ ವರ್ಷಕ್ಕಿಂತ ಸುಧಾರಣೆಯನ್ನು ತೋರಿಸುತ್ತದೆ.

The live storage capacity in India’s 150 primary reservoirs has dropped to 36 per cent of their total capacity while the southern states like Karnataka face a significant shortfall in water storage compared to the previous year and the ten-year average, according to official data. -PTI

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

10 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

18 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago