Advertisement
MIRROR FOCUS

ಜಲಾಶಯಗಳಲ್ಲಿ ನೀರು ಶೇಖರಣೆ ಕುಸಿತ | ದಕ್ಷಿಣ ರಾಜ್ಯಗಳಲ್ಲಿ ಗಮನಾರ್ಹವಾಗಿ ನೀರಿನ ಕೊರತೆ | ಕೇಂದ್ರ ಜಲ ಆಯೋಗ ವರದಿ |

Share

ಭಾರತದ 150 ಪ್ರಾಥಮಿಕ ಜಲಾಶಯಗಳಲ್ಲಿ ಜಲ ಸಂಗ್ರಹಣಾ ಒಟ್ಟು ಸಾಮರ್ಥ್ಯದ ಶೇಕಡಾ 36 ರಷ್ಟು ಮಾತ್ರಾ ನೀರು ಇದೆ.  ಕರ್ನಾಟಕದಂತಹ ದಕ್ಷಿಣದ ರಾಜ್ಯಗಳು ಹಿಂದಿನ ವರ್ಷ ಮತ್ತು ಹಿಂದಿನ ಹತ್ತು ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹದಲ್ಲಿ ಗಮನಾರ್ಹ ಕೊರತೆಯನ್ನು ಎದುರಿಸುತ್ತಿವೆ ಎಂದು ಕೇಂದ್ರ ಜಲ ಆಯೋಗವು ತನ್ನ ಸಾಪ್ತಾಹಿಕ ಬುಲೆಟಿನ್‌ನಲ್ಲಿ ವರದಿ ಮಾಡಿದೆ.

ಬೆಂಗಳೂರಿನಂತಹ ನಗರಗಳು ನೀರಿನ ಕೊರತೆಯಿಂದ ಬಳಲುತ್ತಿವೆ, ಕಳೆದ ವರ್ಷದ ಮುಂಗಾರಿನಲ್ಲಿ ಕರ್ನಾಟಕದಲ್ಲಿ ಮಳೆ ಕೊರತೆ, ಜಲಾಶಯದ ನೀರಿನ ಮಟ್ಟದಲ್ಲಿನ ಕುಸಿತ ಮತ್ತು ತ್ವರಿತ ನಗರೀಕರಣದಿಂದ ಕೆರೆಗಳು ಬತ್ತಲು ಕಾರಣ ಎಂದು ಹೇಳಬಹುದು ಎಂದು ವರದಿಯಲ್ಲಿ ತಿಳಿಸಿದೆ.

ಕೇಂದ್ರ ಜಲ ಆಯೋಗವು ತನ್ನ ಸಾಪ್ತಾಹಿಕ ಬುಲೆಟಿನ್‌ನಲ್ಲಿ, 150 ಜಲಾಶಯಗಳ ಒಟ್ಟು ನೀರಿನ ಶೇಖರಣಾ ಸಾಮರ್ಥ್ಯ 178.784 ಬಿಪಿ (ಬಿಲಿಯನ್ ಕ್ಯೂಬಿಕ್ ಮೀಟರ್) ಆಗಿದೆ. ಆದರೆ ಈಗಿನ ಶೇಖರಣೆಯು  64.606 ಬಿಪಿ ಆಗಿದೆ. ಇದು ಈ ಜಲಾಶಯಗಳ ಶೇಖರಣಾ ಸಾಮರ್ಥ್ಯದ 36 ರಷ್ಟಾಗಿದೆ.

ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದಂತಹ ರಾಜ್ಯಗಳನ್ನು ಒಳಗೊಂಡಿರುವ ಉತ್ತರ ಪ್ರದೇಶದಲ್ಲಿ, ಒಟ್ಟು  ಸಂಗ್ರಹಣೆಯು ಅವುಗಳ ಒಟ್ಟು ಸಾಮರ್ಥ್ಯದ ಶೇಕಡಾ 32 ರಷ್ಟಿದೆ. ಈ ಅಂಕಿ ಅಂಶವು ಗಮನಿಸಿದರೆ, ಕಳೆದ ವರ್ಷದ  ಅವಧಿಯಲ್ಲಿ ಶೇಖರಣಾ ಮಟ್ಟಕ್ಕಿಂತ  ಕಡಿಮೆಯಾಗಿದೆ ಮತ್ತು ಹತ್ತು ವರ್ಷಗಳ ಸರಾಸರಿಗಿಂತ ಕಡಿಮೆಯಾಗಿದೆ. ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳು ಸೇರಿದಂತೆ ದಕ್ಷಿಣ ಪ್ರದೇಶವು ಹಿಂದಿನ ವರ್ಷ ಮತ್ತು ಹತ್ತು ವರ್ಷಗಳ ಸರಾಸರಿ ಎರಡಕ್ಕೂ ಹೋಲಿಸಿದರೆ ನೀರಿನ ಸಂಗ್ರಹಣೆಯಲ್ಲಿ ಗಮನಾರ್ಹ ಕೊರತೆಯನ್ನು ಎದುರಿಸುತ್ತಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹದಲ್ಲಿ ಕುಸಿತವನ್ನು ಎದುರಿಸುತ್ತಿವೆ. ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳನ್ನು ಒಳಗೊಂಡಿರುವ ಕೇಂದ್ರ ಪ್ರದೇಶವು ಹಿಂದಿನ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹದಲ್ಲಿ ಇಳಿಕೆ ಕಂಡಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಅಸ್ಸಾಂ, ಜಾರ್ಖಂಡ್ ಮತ್ತು ಒಡಿಶಾದಂತಹ ರಾಜ್ಯಗಳನ್ನು ಒಳಗೊಂಡಿರುವ ಪೂರ್ವ ಪ್ರದೇಶವು ನೀರಿನ ಲಭ್ಯತೆ ಹೆಚ್ಚು ಹೊಂದಿದೆ.  ಜಲಾಶಯಗಳಲ್ಲಿ ಲಭ್ಯವಿರುವ ಒಟ್ಟು ನೇರ ಸಂಗ್ರಹಣೆಯು ಅವುಗಳ ಸಾಮರ್ಥ್ಯದ 47.49 ಪ್ರತಿಶತದಷ್ಟು ದಾಖಲಾಗಿದೆ, ಇದು ಹಿಂದಿನ ವರ್ಷಕ್ಕಿಂತ ಸುಧಾರಣೆಯನ್ನು ತೋರಿಸುತ್ತದೆ.

The live storage capacity in India’s 150 primary reservoirs has dropped to 36 per cent of their total capacity while the southern states like Karnataka face a significant shortfall in water storage compared to the previous year and the ten-year average, according to official data. -PTI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

1 hour ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

9 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

19 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

20 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago