ಸಾಹಿತ್ಯ

ಅದೊಂದು ಮರೆಯದ ದಿನ…… |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಯುವ ಬರಹಗಾರ್ತಿ ಅನನ್ಯ ಅವರು ಕಥೆ ಬರೆದಿದ್ದಾರೆ. ಅದರ ಯಥಾ ರೂಪ ಇಲ್ಲಿದೆ…

ನಾನೊಬ್ಬಳು ದ್ವಿತೀಯ ಪಿಯುಸಿ ಹುಡುಗಿ ಪರೀಕ್ಷೆಯ ದಿನದ ಸಮಯದಲ್ಲಿ ನಾನೊಬ್ಬಳೇ ಮನೆಯಲ್ಲಿ ಓದುವ ಕ್ಷಣ. ಸಂಬಂಧಿಕರ ಮನೆಯಲ್ಲಿ ವಿಜ್ರಂಭಣೆಯಿಂದ ನಡೆಯುವ ಮದುವೆ ಸಮಾರಂಭಕ್ಕೆ ಮನೆಯವರೆಲ್ಲಾ ನೀನು ಬರಬೇಡ ನಿನಗೆ ಪರೀಕ್ಷೆರಲ್ಲವೇ ಓದಿ ಎಲ್ಲಾ ಮುಗಿಸು ಯಾರು ಇರಲ್ಲ ಮನೆಯಲ್ಲಿ ಯಾರದ್ದೂ ಸಹ ಕಿರಿಕಿರಿ ಗಲಭೆಗಳಿಲ್ಲವಲ್ಲ ಎಂದು ಹೊರಟು ಹೋದರು.

Advertisement

ನಾನು ಕೋಪ ಬೇಜಾರವನ್ನು ಮುಂದಿಟ್ಟುಕೊಂಡು ಮನಸಿಲ್ಲದಿದ್ದರು ಓದಿ ಮುಗಿಸುವೆ ಎಂದು ಕುಳಿತುಕೊಂಡೆ. ಓದಲು ಕೂತ ಕ್ಷಣ ಒಂದು ಮಾತ್ರ ನೆನಪು ಇದೆ…. ಮತ್ತೇನಾಯಿತು ಎಂದು ಅರಿವಿಲ್ಲ. ಹೊಟ್ಟೆಗೆ ಊಟ, ನೀರು ಇಲ್ಲದೆ ಪ್ರಪಂಚವೇ ತಲೆ ಮೇಲೆ ಬಿದ್ದಂತೆ ಕುಳಿತುಕೊಂಡು ಓದಿರೋದರಲ್ಲಿ ಕಣ್ಣು ಮುಚ್ಚಿ ನಿದ್ದೆ ಹೋಗಿರುವುದು ಗೊತ್ತೇ ಇಲ್ಲ.

ಎಚ್ಚರವಾದಾಗ ಎದ್ದು ನೋಡಿದರೇ ಏನೂ ಗೊತ್ತಾಗುತ್ತಿಲ್ಲ ಓದಲು ಹಿಡಿದಿದ್ದ ಪುಸ್ತಕಗಳು ಎಲ್ಲಾ ಹರಿದು ನೆಲದಲ್ಲಿ ಉರುಳಿ ಬಿದ್ದಿದೆ. ಬಾಗಿಲು ಕಿಟಕಿಗಳೆಲ್ಲ ತೆರೆದು ಗಾಳಿಗೆ ಬಡಿಯುತ್ತಾ ಶಬ್ದ ಬರುತ್ತಿತ್ತು. ಗಡಿಯಾರದ ಕಡೆ ಕಣ್ಣು ಹಾಯಿಸಿದರೆ ಒಂದು ಕ್ಷಣ ಎದೆಗೆ ಬಡಿದಂತಿತ್ತು. ಹೊತ್ತು ದಾಟಿ ರಾತ್ರಿ 8 ಗಂಟೆ ಆಗಿ ಬಿಟ್ಟಿತ್ತು.

ಮನೆಯಲ್ಲಾ ಹುಡುಕಾಡಿದರೂ ಅಮ್ಮ ಸಿಗಲೇ ಇಲ್ಲ. ಅಮ್ಮ ಸಂಬಂಧಿಕರ ಮನೆಗೆ ಹೋಗಿರುವುದನ್ನು ಮರೆತುಬಿಟ್ಟು ಹುಡುಕಾಡಿರುವೆ ಎಂದು ತಡವಾಗಿ ಅರಿವಾಯಿತು. ಕಣ್ಣೀರು ಹಾಕುತ್ತಲೇ ತಿನ್ನಲು ಏನಾರು ಮಾಡಬೇಕೆಂದು ಅಡುಗೆ ಮನೆ ಕಡೆಗೆ ಹೋಗುವೆ. ಮಾಡಲು ಏನೂ ಗೊತ್ತಿಲ್ಲದಿದ್ದರೂ, ಮಾಡಿಕೊಂಡು ತಿನ್ನುವುದು ಅನಿವಾರ್ಯವಾಗಿದ್ದರಿಂದ ಅನ್ನ ಬೇಯಿಸಿ ಹೆಂಗೋ ಒಂದು ಸಪ್ಪೆ ಸಪ್ಪೆಯಾದ ಸಾಂಬಾರು ಮಾಡಿ ಊಟ ಮಾಡಿದೆ ಅದು 10 ಗಂಟೆ ಕಳೆದ ನಂತರ.

ಇನ್ನೂ ಮಲಗುವುದಾ… ಅಲ್ಲಾ… ಓದುವುದಾ ಎಂದು ಅರಿತಿಲ್ಲ… ಈಚೆ ನೋಡಿದರೆ ನಾಳೆಯ ಪರೀಕ್ಷೆಗೆ ಬೇಕಾದ ಪಾಠಗಳೇ ಓದಿ ಆಗಿಲ್ಲ. ಮಲಗುದು ಎಂದರೇ ಮನೆಯಲ್ಲಿ ಯಾರಿಲ್ಲ ಎಂಬ ಭಯ. ಈ ಕರಾಳ ದಿನ ಎಂದೂ ನನಗೆ ಬರುವುದು ಬೇಡ ಎಂದೂ ದೇವರ ಮೊರೆ ಹೋದೆ.

Advertisement

ದೇವರನ್ನು ಪ್ರಾರ್ಥಿಸುವಾಗಲೇ ಹೊರಗಡೆಯಿಂದ ಏನೋ ವಿಚಿತ್ರ ಧ್ವನಿಯಲ್ಲಿ ನಾಯಿಗಳ ಕೂಗು. ಹೊರಗಡೆಯೂ ಹೋಗದೇ ಕುಳಿತಲ್ಲೇ ಕಣ್ಣು ಮುಚ್ಚಿ ಜೋರಾಗಿ ಅಳುತ್ತಾ ಅಲ್ಲೇ ಕುಳಿತೇ. ಭಯದಲ್ಲಿ ಅದೊಂದು ರಾತ್ರಿಯನ್ನು ಕಳೆದುಕೊಂಡಿರುವೆ.

ಮರುದಿನ ಕಾಲೇಜಿಗೆ ಹೋಗಿ ಗೆಳತಿಯರೊಂದಿಗೆ ನಡೆದ ಘಟನೆಯನ್ನು ಹೇಳುತ್ತಾ ದುಃಖ ಪಟ್ಟಿರುವೆ. ನಾನು ಎಷ್ಟು ದೊಡ್ಡವಳಾದರೂ, ಎಲ್ಲೇ ಹೋದರೂ ಇದೊಂದು ಕರಾಳ ಕ್ಷಣವನ್ನು ಎಂದೂ ಮರೆಯಲ್ಲ ಅಂದು ಮನಸ್ಸಿಗೆ ತುಂಬಾ ಹತ್ತಿರವಾಗಿರುವ ಗೆಳತಿಯನ್ನು ಅಪ್ಪಿಕೊಂಡು ಮೌನವಾದೆ.
ಬರಹ:
# ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

2 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

2 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

12 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

12 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

12 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

12 hours ago