ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ | ಸಚಿವ ಪ್ರಲ್ಹಾದ್  ಜೋಷಿ ಸ್ಪಷ್ಟನೆ

March 27, 2025
10:43 AM

ಆಹಾರ ಕಲಬೆರಕೆ  ದೂರುಗಳ ವಿರುದ್ಧ ಸರ್ಕಾರ  ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ  ಯೋಗ್ಯವಾಗಿಲ್ಲದಿದ್ದರೆ  ಕ್ರಿಮಿನಲ್  ಮೊಕದ್ದಮೆಗಳನ್ನು ಹೂಡಿ  ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.

ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ  242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ  ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು  ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror