ಆಹಾರ ಕಲಬೆರಕೆ ದೂರುಗಳ ವಿರುದ್ಧ ಸರ್ಕಾರ ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ ಯೋಗ್ಯವಾಗಿಲ್ಲದಿದ್ದರೆ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಿ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ 242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…