ಆಹಾರ ಕಲಬೆರಕೆ ದೂರುಗಳ ವಿರುದ್ಧ ಸರ್ಕಾರ ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ ಯೋಗ್ಯವಾಗಿಲ್ಲದಿದ್ದರೆ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಿ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ 242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…