MIRROR FOCUS

ಚೀನಾದ ಗಡಿ ಪ್ರದೇಶದಲ್ಲಿ ಪ್ರಬಲ ಭೂಕಂಪನ | ಬರೋಬ್ಬರಿ 100ಕ್ಕೂ ಹೆಚ್ಚು ಜನರ ಸಾವು | 200ಕ್ಕೂ |ಹೆಚ್ಚು ಮಂದಿಗೆ ಗಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಕೃತಿ ಮುನಿಸು(Disaster) ಯಾವಾಗ ಎಲ್ಲಿ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಲು ಅಸಾಧ್ಯ. ಇದೀಗ ಚೀನಾದ ಗನ್ಸು-ಕಿಂಗ್ಹೈ (China’s Gansu) ಗಡಿ ಪ್ರದೇಶದಲ್ಲಿ ಭೀಕರ ಭೂಕಂಪ (Earthquake) ಸಂಭವಿಸಿದ್ದು, 111 ಮಂದಿ ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರವು (EMSC) ಭೂಕಂಪದ ತೀವ್ರತೆಯನ್ನು 6.1 ಎಂದು ಗುರುತಿಸಿದೆ. ಆದ್ರೆ ಚೀನಾದ ಸರ್ಕಾರಿ ಮಾಧ್ಯಮ ಭೂಕಂಪದ ತೀವ್ರತೆ 6.2 ಎಂದು ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಪಶ್ಚಿಮ-ನೈಋತ್ಯಕ್ಕೆ 102 ಕಿಮೀ ದೂರದಲ್ಲಿರುವ ಗನ್ಸು (Gansu) ಪ್ರಾಂತ್ಯದ ರಾಜಧಾನಿ ಲಾನ್‌ಝೌ ಬಳಿ 35 ಕಿಮೀ ಆಳದಲ್ಲಿ ಪತ್ತೆಯಾಗಿದೆ.

Advertisement
Advertisement

ಕ್ವಿಂಗ್‌ಹೈ ಪ್ರಾಂತ್ಯದ ಹಲವು ಭಾಗಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದೆ. ವಿಪತ್ತು ನಿರ್ವಹಣೆ, ಕಡಿತ ಮತ್ತು ಪರಿಹಾರಕ್ಕಾಗಿ ಚೀನಾದ ರಾಷ್ಟ್ರೀಯ ಆಯೋಗ ಮತ್ತು ತುರ್ತು ನಿರ್ವಹಣೆಯ ಸಚಿವಾಲಯವು 4ನೇ ಹಂತದ ಪರಿಹಾರ, ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೂಕಂಪದ ನಂತರ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಮುಖ ನಿರ್ದೇಶನ ನೀಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು, ಸಂಕಷ್ಟಕ್ಕೆ ಸಿಲುಕಿರುವ ಜನರ ಪುನರ್ವಸತಿಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲಾಗುತ್ತಿದೆ.

ಚೀನಾ ಹವಾಮಾನ ಪರಿಸ್ಥಿತಿಯೂ ಶೀತಮಯವಾಗುತ್ತಿದೆ. ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದ ಸಮೀಪದ ಲಿನ್ಕ್ಸಿಯಾ, ಗನ್ಸುನಲ್ಲಿ ತಾಪಮಾನ ಮೈನಸ್ 14 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಕಳೆದ ಒಂದು ವಾರದಿಂದ ಪ್ರಾರಂಭವಾದ ಶೀತದ ಅಲೆ ದೇಶದಾದ್ಯಂತ ವ್ಯಾಪಿಸುತ್ತಲೇ ಇದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಭೂಕಂಪದಿಂದ ಕೆಲವು ನೀರು, ವಿದ್ಯುತ್, ಸಾರಿಗೆ, ಸಂಪರ್ಕ ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

– ಅಂತರ್ಜಾಲ ಮಾಹಿತಿ

The official Xinhua News Agency, as quoted by The Associated Press, said that 100 people died in the province of Gansu and another 11 in the neighboring province of Qinghai in the quake. More than 200 people were injured in Gansu and Qinghai provinces, said Xinhua, adding that the quake struck in Gansu’s Jishishan county, about 5 kilometers (3 miles) from the provincial boundary with Qinghai.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

4 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

6 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

11 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

12 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

17 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

19 hours ago