Advertisement
MIRROR FOCUS

ಚೀನಾದ ಗಡಿ ಪ್ರದೇಶದಲ್ಲಿ ಪ್ರಬಲ ಭೂಕಂಪನ | ಬರೋಬ್ಬರಿ 100ಕ್ಕೂ ಹೆಚ್ಚು ಜನರ ಸಾವು | 200ಕ್ಕೂ |ಹೆಚ್ಚು ಮಂದಿಗೆ ಗಾಯ

Share

ಪ್ರಕೃತಿ ಮುನಿಸು(Disaster) ಯಾವಾಗ ಎಲ್ಲಿ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಲು ಅಸಾಧ್ಯ. ಇದೀಗ ಚೀನಾದ ಗನ್ಸು-ಕಿಂಗ್ಹೈ (China’s Gansu) ಗಡಿ ಪ್ರದೇಶದಲ್ಲಿ ಭೀಕರ ಭೂಕಂಪ (Earthquake) ಸಂಭವಿಸಿದ್ದು, 111 ಮಂದಿ ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರವು (EMSC) ಭೂಕಂಪದ ತೀವ್ರತೆಯನ್ನು 6.1 ಎಂದು ಗುರುತಿಸಿದೆ. ಆದ್ರೆ ಚೀನಾದ ಸರ್ಕಾರಿ ಮಾಧ್ಯಮ ಭೂಕಂಪದ ತೀವ್ರತೆ 6.2 ಎಂದು ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಪಶ್ಚಿಮ-ನೈಋತ್ಯಕ್ಕೆ 102 ಕಿಮೀ ದೂರದಲ್ಲಿರುವ ಗನ್ಸು (Gansu) ಪ್ರಾಂತ್ಯದ ರಾಜಧಾನಿ ಲಾನ್‌ಝೌ ಬಳಿ 35 ಕಿಮೀ ಆಳದಲ್ಲಿ ಪತ್ತೆಯಾಗಿದೆ.

ಕ್ವಿಂಗ್‌ಹೈ ಪ್ರಾಂತ್ಯದ ಹಲವು ಭಾಗಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದೆ. ವಿಪತ್ತು ನಿರ್ವಹಣೆ, ಕಡಿತ ಮತ್ತು ಪರಿಹಾರಕ್ಕಾಗಿ ಚೀನಾದ ರಾಷ್ಟ್ರೀಯ ಆಯೋಗ ಮತ್ತು ತುರ್ತು ನಿರ್ವಹಣೆಯ ಸಚಿವಾಲಯವು 4ನೇ ಹಂತದ ಪರಿಹಾರ, ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೂಕಂಪದ ನಂತರ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಮುಖ ನಿರ್ದೇಶನ ನೀಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು, ಸಂಕಷ್ಟಕ್ಕೆ ಸಿಲುಕಿರುವ ಜನರ ಪುನರ್ವಸತಿಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲಾಗುತ್ತಿದೆ.

ಚೀನಾ ಹವಾಮಾನ ಪರಿಸ್ಥಿತಿಯೂ ಶೀತಮಯವಾಗುತ್ತಿದೆ. ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದ ಸಮೀಪದ ಲಿನ್ಕ್ಸಿಯಾ, ಗನ್ಸುನಲ್ಲಿ ತಾಪಮಾನ ಮೈನಸ್ 14 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಕಳೆದ ಒಂದು ವಾರದಿಂದ ಪ್ರಾರಂಭವಾದ ಶೀತದ ಅಲೆ ದೇಶದಾದ್ಯಂತ ವ್ಯಾಪಿಸುತ್ತಲೇ ಇದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಭೂಕಂಪದಿಂದ ಕೆಲವು ನೀರು, ವಿದ್ಯುತ್, ಸಾರಿಗೆ, ಸಂಪರ್ಕ ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

– ಅಂತರ್ಜಾಲ ಮಾಹಿತಿ

The official Xinhua News Agency, as quoted by The Associated Press, said that 100 people died in the province of Gansu and another 11 in the neighboring province of Qinghai in the quake. More than 200 people were injured in Gansu and Qinghai provinces, said Xinhua, adding that the quake struck in Gansu’s Jishishan county, about 5 kilometers (3 miles) from the provincial boundary with Qinghai.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 hour ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

12 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

13 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

16 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago