Advertisement
MIRROR FOCUS

ಚೀನಾದ ಗಡಿ ಪ್ರದೇಶದಲ್ಲಿ ಪ್ರಬಲ ಭೂಕಂಪನ | ಬರೋಬ್ಬರಿ 100ಕ್ಕೂ ಹೆಚ್ಚು ಜನರ ಸಾವು | 200ಕ್ಕೂ |ಹೆಚ್ಚು ಮಂದಿಗೆ ಗಾಯ

Share

ಪ್ರಕೃತಿ ಮುನಿಸು(Disaster) ಯಾವಾಗ ಎಲ್ಲಿ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಲು ಅಸಾಧ್ಯ. ಇದೀಗ ಚೀನಾದ ಗನ್ಸು-ಕಿಂಗ್ಹೈ (China’s Gansu) ಗಡಿ ಪ್ರದೇಶದಲ್ಲಿ ಭೀಕರ ಭೂಕಂಪ (Earthquake) ಸಂಭವಿಸಿದ್ದು, 111 ಮಂದಿ ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರವು (EMSC) ಭೂಕಂಪದ ತೀವ್ರತೆಯನ್ನು 6.1 ಎಂದು ಗುರುತಿಸಿದೆ. ಆದ್ರೆ ಚೀನಾದ ಸರ್ಕಾರಿ ಮಾಧ್ಯಮ ಭೂಕಂಪದ ತೀವ್ರತೆ 6.2 ಎಂದು ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಪಶ್ಚಿಮ-ನೈಋತ್ಯಕ್ಕೆ 102 ಕಿಮೀ ದೂರದಲ್ಲಿರುವ ಗನ್ಸು (Gansu) ಪ್ರಾಂತ್ಯದ ರಾಜಧಾನಿ ಲಾನ್‌ಝೌ ಬಳಿ 35 ಕಿಮೀ ಆಳದಲ್ಲಿ ಪತ್ತೆಯಾಗಿದೆ.

ಕ್ವಿಂಗ್‌ಹೈ ಪ್ರಾಂತ್ಯದ ಹಲವು ಭಾಗಗಳಲ್ಲಿಯೂ ಭೂಮಿ ಕಂಪಿಸಿದ ಅನುಭವವಾಗಿದೆ. ವಿಪತ್ತು ನಿರ್ವಹಣೆ, ಕಡಿತ ಮತ್ತು ಪರಿಹಾರಕ್ಕಾಗಿ ಚೀನಾದ ರಾಷ್ಟ್ರೀಯ ಆಯೋಗ ಮತ್ತು ತುರ್ತು ನಿರ್ವಹಣೆಯ ಸಚಿವಾಲಯವು 4ನೇ ಹಂತದ ಪರಿಹಾರ, ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭೂಕಂಪದ ನಂತರ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪ್ರಮುಖ ನಿರ್ದೇಶನ ನೀಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು, ಸಂಕಷ್ಟಕ್ಕೆ ಸಿಲುಕಿರುವ ಜನರ ಪುನರ್ವಸತಿಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲಾಗುತ್ತಿದೆ.

ಚೀನಾ ಹವಾಮಾನ ಪರಿಸ್ಥಿತಿಯೂ ಶೀತಮಯವಾಗುತ್ತಿದೆ. ಮಂಗಳವಾರ ಬೆಳಗ್ಗೆ ಭೂಕಂಪ ಸಂಭವಿಸಿದ ಸಮೀಪದ ಲಿನ್ಕ್ಸಿಯಾ, ಗನ್ಸುನಲ್ಲಿ ತಾಪಮಾನ ಮೈನಸ್ 14 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಕಳೆದ ಒಂದು ವಾರದಿಂದ ಪ್ರಾರಂಭವಾದ ಶೀತದ ಅಲೆ ದೇಶದಾದ್ಯಂತ ವ್ಯಾಪಿಸುತ್ತಲೇ ಇದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಭೂಕಂಪದಿಂದ ಕೆಲವು ನೀರು, ವಿದ್ಯುತ್, ಸಾರಿಗೆ, ಸಂಪರ್ಕ ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.

– ಅಂತರ್ಜಾಲ ಮಾಹಿತಿ

The official Xinhua News Agency, as quoted by The Associated Press, said that 100 people died in the province of Gansu and another 11 in the neighboring province of Qinghai in the quake. More than 200 people were injured in Gansu and Qinghai provinces, said Xinhua, adding that the quake struck in Gansu’s Jishishan county, about 5 kilometers (3 miles) from the provincial boundary with Qinghai.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

8 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

9 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago