ಕ್ರೀಡಾ ಸಾಧನೆ ಮಾಡಿ ಗಮನಸೆಳೆದ ಗ್ರಾಮೀಣ ಭಾಗದ ವಿದ್ಯಾರ್ಥಿನಿ |

November 10, 2024
1:00 PM

ಸಿಕ್ಕಿದ ಅವಕಾಶವನ್ನೇ ಬಳಸಿಕೊಂಡು ಬುಡಕಟ್ಟು – ಸಿದ್ದಿ ಸಮುದಾಯದ ವಿದ್ಯಾರ್ಥಿಯೊಬ್ಬರು ರಾಷ್ಟ್ರಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.  

ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಸಿದ್ದಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿ ಮನಿಷಾ ಸಿದ್ದಿ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲೂ ತಮ್ಮ ಸಾಧನೆ ದಾಖಲಿಸುತ್ತಿದ್ದಾರೆ.

Advertisement

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕುಗ್ರಾಮ ಜಟ್ಕಾ ಹೊಸೂರಿನ ಮನಿಷಾ ಸಿದ್ದಿ, ಕುಸ್ತಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲೆ, ರಾಜ್ಯ ತಮ್ಮ ಕಡೆಗೆ ನೋಡುವಂತೆ ಮಾಡಿದ್ದಾರೆ. ಮನಿಷಾ ಅವರಿಗೆ ಬಾಲ್ಯದಿಂದಲೇ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ. ಇದನ್ನು ಗಮನಿಸಿದ ಜೋಯಿಡಾ ತಾಲೂಕಿನ ರಾಮನಗರದ ಬಾಪೂಜಿ ಕಾಲೇಜು ಮತ್ತು ಕೆಲ ದಾನಿಗಳ ಪ್ರೋತ್ಸಾಹದಿಂದ ಕುಸ್ತಿಯಲ್ಲಿ ಮತ್ತಷ್ಟು ಆಸಕ್ತಿಯನ್ನು ಹೆಚ್ಚಿಸಿದೆ. ಓದು ಮತ್ತು ಕ್ರೀಡೆ ಎರಡನ್ನೂ ನಿಯಮಿತವಾಗಿ ಅಭ್ಯಾಸ ಮಾಡುತ್ತಿರುವ ಅವರು ಹಳಿಯಾಳ ತಾಲೂಕಿನಲ್ಲಿ ಜನಪ್ರಿಯವಾಗಿರುವ ಕುಸ್ತಿ ಕ್ರೀಡೆಗೆ ಇನ್ನೊಂದು ಗರಿ ಮೂಡಿಸಿದ್ದಾರೆ. ಬಡತನ ಮತ್ತು ಶಿಕ್ಷಣದಲ್ಲಿ ಹಿಂದುಳಿದಿರುವ ಸಮುದಾಯದ ಮನಿಷಾ ಸಿದ್ದಿ, ಕುಸ್ತಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಹ ಸಾಧನೆ ಮಾಡಬೇಕೆಂಬ ಛಲ ಹಾಗೂ ಮಹತ್ವಾಕಾಂಕ್ಷೆ ಹೊಂದಿದ್ದಾರೆ.

Advertisement

ಈಗಾಗಲೇ ರಾಷ್ರಮಟ್ಟದಲ್ಲಿ ಬೆಳ್ಳಿ ಪದಕ, ದಸರಾ ಕ್ರೀಡಾ ಕೂಟದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕಗಳನ್ನು ಗಳಿಸಿ ಮುಂದೊಂದು ದಿನ ದೊಡ್ಡ ಸಾಧನೆ ಮಾಡುವ ವಿಶ್ವಾಸ ಮೂಡಿಸಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ 68ನೇ ರಾಷ್ಟ್ರೀಯ ಸ್ಕೂಲ್ ಗೇಮ್ ನ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ 72 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ
July 4, 2026
11:47 AM
by: ಸಾಯಿಶೇಖರ್ ಕರಿಕಳ
2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?
July 4, 2026
11:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror