Advertisement
MIRROR FOCUS

ಕ್ರೀಡಾ ಸಾಧನೆ ಮಾಡಿ ಗಮನಸೆಳೆದ ಗ್ರಾಮೀಣ ಭಾಗದ ವಿದ್ಯಾರ್ಥಿನಿ |

Share

ಸಿಕ್ಕಿದ ಅವಕಾಶವನ್ನೇ ಬಳಸಿಕೊಂಡು ಬುಡಕಟ್ಟು – ಸಿದ್ದಿ ಸಮುದಾಯದ ವಿದ್ಯಾರ್ಥಿಯೊಬ್ಬರು ರಾಷ್ಟ್ರಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.  

ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಸಿದ್ದಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿ ಮನಿಷಾ ಸಿದ್ದಿ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲೂ ತಮ್ಮ ಸಾಧನೆ ದಾಖಲಿಸುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕುಗ್ರಾಮ ಜಟ್ಕಾ ಹೊಸೂರಿನ ಮನಿಷಾ ಸಿದ್ದಿ, ಕುಸ್ತಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲೆ, ರಾಜ್ಯ ತಮ್ಮ ಕಡೆಗೆ ನೋಡುವಂತೆ ಮಾಡಿದ್ದಾರೆ. ಮನಿಷಾ ಅವರಿಗೆ ಬಾಲ್ಯದಿಂದಲೇ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ. ಇದನ್ನು ಗಮನಿಸಿದ ಜೋಯಿಡಾ ತಾಲೂಕಿನ ರಾಮನಗರದ ಬಾಪೂಜಿ ಕಾಲೇಜು ಮತ್ತು ಕೆಲ ದಾನಿಗಳ ಪ್ರೋತ್ಸಾಹದಿಂದ ಕುಸ್ತಿಯಲ್ಲಿ ಮತ್ತಷ್ಟು ಆಸಕ್ತಿಯನ್ನು ಹೆಚ್ಚಿಸಿದೆ. ಓದು ಮತ್ತು ಕ್ರೀಡೆ ಎರಡನ್ನೂ ನಿಯಮಿತವಾಗಿ ಅಭ್ಯಾಸ ಮಾಡುತ್ತಿರುವ ಅವರು ಹಳಿಯಾಳ ತಾಲೂಕಿನಲ್ಲಿ ಜನಪ್ರಿಯವಾಗಿರುವ ಕುಸ್ತಿ ಕ್ರೀಡೆಗೆ ಇನ್ನೊಂದು ಗರಿ ಮೂಡಿಸಿದ್ದಾರೆ. ಬಡತನ ಮತ್ತು ಶಿಕ್ಷಣದಲ್ಲಿ ಹಿಂದುಳಿದಿರುವ ಸಮುದಾಯದ ಮನಿಷಾ ಸಿದ್ದಿ, ಕುಸ್ತಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಹ ಸಾಧನೆ ಮಾಡಬೇಕೆಂಬ ಛಲ ಹಾಗೂ ಮಹತ್ವಾಕಾಂಕ್ಷೆ ಹೊಂದಿದ್ದಾರೆ.

ಈಗಾಗಲೇ ರಾಷ್ರಮಟ್ಟದಲ್ಲಿ ಬೆಳ್ಳಿ ಪದಕ, ದಸರಾ ಕ್ರೀಡಾ ಕೂಟದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕಗಳನ್ನು ಗಳಿಸಿ ಮುಂದೊಂದು ದಿನ ದೊಡ್ಡ ಸಾಧನೆ ಮಾಡುವ ವಿಶ್ವಾಸ ಮೂಡಿಸಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ 68ನೇ ರಾಷ್ಟ್ರೀಯ ಸ್ಕೂಲ್ ಗೇಮ್ ನ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ 72 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

20 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

21 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

24 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago