ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯ ನಡೆಸಿದ್ದಾನೆ.
ಗೋಮತಿ ನಗರ ವಿಸ್ತರಣೆಯ ನಿವಾಸಿ ಆದಿತ್ಯ ತಿವಾರಿ ಎಂಬ 9 ನೇ ತರಗತಿಯ ವಿದ್ಯಾರ್ಥಿ ರೈಲ್ವೇ ಹಳಿಯಲ್ಲಿ ಗಾಯಗೊಂಡಿದ್ದು, ಇದೀಗ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿರುವ ಈತ ತನ್ನ ವ್ಯಾಸಂಗದಲ್ಲಿ ಉತ್ತಮವಾಗಿದ್ದು, ಆದರೆ ಅವನು ತನ್ನ ಕೊನೆಯ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪಾಲಕ-ಶಿಕ್ಷಕರ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಭೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಆದಿತ್ಯನ ಪೋಷಕರನ್ನು ಭೇಟಿಯಾಗಲು ಮನೆಗೆ ಹೋಗುವುದಾಗಿ ಶಿಕ್ಷಕರು ನಿರ್ಧರಿಸಿದ್ದರು. ಇದನ್ನು ತಿಳಿದ ಆದಿತ್ಯ ಹೆದರಿದ ತನ್ನ ಜೀವನವನ್ನು ಅಂತ್ಯಗೊಳಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಅದಕ್ಕೂ ಮುನ್ನ ಪತ್ರ ಬರೆದಿದ್ದ, ಹೀಗಾಗಿ ಘನೆಯ ಕಾರಣ ತಿಳಿದಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…