ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯ ನಡೆಸಿದ್ದಾನೆ.
ಗೋಮತಿ ನಗರ ವಿಸ್ತರಣೆಯ ನಿವಾಸಿ ಆದಿತ್ಯ ತಿವಾರಿ ಎಂಬ 9 ನೇ ತರಗತಿಯ ವಿದ್ಯಾರ್ಥಿ ರೈಲ್ವೇ ಹಳಿಯಲ್ಲಿ ಗಾಯಗೊಂಡಿದ್ದು, ಇದೀಗ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿರುವ ಈತ ತನ್ನ ವ್ಯಾಸಂಗದಲ್ಲಿ ಉತ್ತಮವಾಗಿದ್ದು, ಆದರೆ ಅವನು ತನ್ನ ಕೊನೆಯ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪಾಲಕ-ಶಿಕ್ಷಕರ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಭೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಆದಿತ್ಯನ ಪೋಷಕರನ್ನು ಭೇಟಿಯಾಗಲು ಮನೆಗೆ ಹೋಗುವುದಾಗಿ ಶಿಕ್ಷಕರು ನಿರ್ಧರಿಸಿದ್ದರು. ಇದನ್ನು ತಿಳಿದ ಆದಿತ್ಯ ಹೆದರಿದ ತನ್ನ ಜೀವನವನ್ನು ಅಂತ್ಯಗೊಳಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಅದಕ್ಕೂ ಮುನ್ನ ಪತ್ರ ಬರೆದಿದ್ದ, ಹೀಗಾಗಿ ಘನೆಯ ಕಾರಣ ತಿಳಿದಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…