ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ ವಿದ್ಯಾರ್ಥಿ ಈ ಕೃತ್ಯ ನಡೆಸಿದ್ದಾನೆ.
ಗೋಮತಿ ನಗರ ವಿಸ್ತರಣೆಯ ನಿವಾಸಿ ಆದಿತ್ಯ ತಿವಾರಿ ಎಂಬ 9 ನೇ ತರಗತಿಯ ವಿದ್ಯಾರ್ಥಿ ರೈಲ್ವೇ ಹಳಿಯಲ್ಲಿ ಗಾಯಗೊಂಡಿದ್ದು, ಇದೀಗ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿರುವ ಈತ ತನ್ನ ವ್ಯಾಸಂಗದಲ್ಲಿ ಉತ್ತಮವಾಗಿದ್ದು, ಆದರೆ ಅವನು ತನ್ನ ಕೊನೆಯ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪಾಲಕ-ಶಿಕ್ಷಕರ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಸಭೆಯಿಂದ ತಪ್ಪಿಸಿಕೊಳ್ಳುತ್ತಿದ್ದು, ಆದಿತ್ಯನ ಪೋಷಕರನ್ನು ಭೇಟಿಯಾಗಲು ಮನೆಗೆ ಹೋಗುವುದಾಗಿ ಶಿಕ್ಷಕರು ನಿರ್ಧರಿಸಿದ್ದರು. ಇದನ್ನು ತಿಳಿದ ಆದಿತ್ಯ ಹೆದರಿದ ತನ್ನ ಜೀವನವನ್ನು ಅಂತ್ಯಗೊಳಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಅದಕ್ಕೂ ಮುನ್ನ ಪತ್ರ ಬರೆದಿದ್ದ, ಹೀಗಾಗಿ ಘನೆಯ ಕಾರಣ ತಿಳಿದಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…