Advertisement
Exclusive - Mirror Hunt

ಕೊರೋನಾ ರಜೆಯಲ್ಲಿ ಕೃಷಿಗಿಳಿದ ವಿದ್ಯಾರ್ಥಿಗಳು | ಕಾಲೇಜು ವಿದ್ಯಾರ್ಥಿಗಳಲ್ಲಿ ಬತ್ತದ ಕೃಷಿ ಉತ್ಸಾಹ

Share

ಕೊರೋನಾ ಅನೇಕರಿಗೆ ಸಂಕಷ್ಟ ಎಂದೆನಿಸಿತು. ಆದರೆ ಈ ಕುಟುಂಬ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಉತ್ಸಾಹ ತಂದಿತು. ಮನೆಯಂಗಳಲ್ಲಿ  ಭತ್ತದ ಕೃಷಿ ಮಾಡಿ ಕೃಷಿಯಲ್ಲೂ ವಿದ್ಯಾರ್ಥಿಗಳಿಗೆ ಆಸಕ್ತಿ ಬತ್ತಿಲ್ಲ ಎಂದು ತೋರಿಸಿದ್ದಾರೆ. ಈ ಕೊರೋನಾ ಪಾಸಿಟಿವ್‌ ಸ್ಟೋರಿ ನೀವು ಓದಬೇಕು. ಗ್ರಾಮೀಣ ಭಾಗದ  ಬದಲಾವಣೆಯ ಈ ಪ್ರತಿಬಿಂಬ ನಿಮ್ಮ ಮುಂದೆ..

Advertisement
Advertisement

Advertisement

 

 

Advertisement

ಕೊರೋನಾ ಸಂಕಷ್ಟ ಎಂದು ಕುಳಿತಿದ್ದರೆ ಈ ವಿದ್ಯಾರ್ಥಿಗಳು ಮೊಬೈಲ್‌ ನೋಡುತ್ತಾ ಕಾಲ ಕಳೆಯುತ್ತಿದ್ದರೇನೋ. ಆದರೆ           ‘ಮನಸ್ಸಿದ್ದರೆ ಮಾರ್ಗ’ ಎಂಬ ಗಾದೆ ಮಾತಿನಂತೆ  ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೂ ಇದೊಂದು ಉದಾಹರಣೆ. ಓದಿನ ನಡುವೆಯೂ ಬಿಡುವು ಮಾಡಿಕೊಂಡು ಭತ್ತ ಬೆಳೆದಿದ್ದು, ಇನ್ನೇನು ಕಟಾವಿಗೆ ಸಿದ್ದಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೇಶವ ಗೌಡ ಹಾಗೂ ನಿರ್ಮಲ ದಂಪತಿಯ ಅವಳಿ ಪುತ್ರರು ಭುವನ್‌ ಹಾಗೂ ಭವನ್‌. ಪ್ರಸ್ತುತ ಸಂತ ಫಿಲೋಮಿನಾ ಕಾಲೇಜಿನಲ್ಲಿ ತೃತೀಯ ವರ್ಷದ ಬಿಎಸ್ಸಿ ವಿಧ್ಯಾಭ್ಯಾಸವನ್ನು ಮಾಡಿಕೊಂಡಿರುವ ಇವರು ಕೋವಿಡ್ 19 ನಂತಹ ಸಂಕಷ್ಟದ ಸಮಯವನ್ನು ಭತ್ತ ಬೆಳೆಯುವ ಮೂಲಕ ಸದುಪಯೋಗಪಡಿಸಿಕೊಂಡಿದ್ದಾರೆ. ಹೆಚ್ಚಾಗಿ ಭತ್ತದ ಕೃಷಿಯನ್ನೇ ಅವಲಂಬಿಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಭತ್ತದ ಬೆಳೆ ಮರೆಯಾಗಿ ವಾಣಿಜ್ಯ ಬೆಳೆಗಳು ತಲೆ ಎತ್ತುತ್ತಿವೆ. ಇದರಿಂದಾಗಿ ಹಲವು ಜನರಿಗೆ ಭತ್ತದ ಕೃಷಿಯ ಬಗ್ಗೆ ಅರಿವೇ ಇಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹೊಸ ತಲೆಮಾರಿನ ಜನರಿಗೆ ಭತ್ತ ಎಲ್ಲಿ ಬೆಳೆಯುತ್ತಾರೆ ಎಂಬುದರ  ಬಗ್ಗೆಯೇ ಸಂಶಯವಿದೆ. ಇಂತಹದ್ದೇ ಸಂಶಯ ತಮ್ಮಮನೆಯ ಪುಟ್ಟ ತಂಗಿಯಲ್ಲಿ ಮೂಡಿದಾಗ ಸ್ವತಃ ತಾವೇ ತಮ್ಮ ಮನೆಯ ಅಂಗಳದಲ್ಲಿ ಭತ್ತ ಬೆಳೆಯುವ ಮೂಲಕ ತಂಗಿಯ ಸಂಶಯವನ್ನು ದೂರಮಾಡಿದ್ದಾರೆ ಹಾಗೂ ಭತ್ತದ ಮಹತ್ವವನ್ನು ಯುವಜನತೆಗೆ ತಿಳಿಸಲು ಮುಂದಾಗಿದ್ದಾರೆ.

 

Advertisement

 

Advertisement

 

 

Advertisement

 

ಕಳೆದ ಮೂರು ವರ್ಷಗಳಿಂದ ಭತ್ತ ಬೆಳೆಯುವುದನ್ನು ಪ್ರಾರಂಭಿಸಿದ ಇವರು ಮನೆಯ ಅಂಗಳವನ್ನು ಸಮತಟ್ಟು ಮಾಡಿ, ಮಣ್ಣನ್ನು ಹದ ಮಾಡಿ, ಮಣ್ಣು ಕೊಚ್ಚಿ ಹೋಗದಂತೆ ಸುತ್ತಲೂ ಕಟ್ಟೆಯನ್ನು ಕಟ್ಟಿ ಭತ್ತದ ಕೃಷಿ ಮಾಡಿದ್ದಾರೆ. ಭತ್ತದ ಪೈರಿನ ಮಧ್ಯೆ ಹುಲ್ಲು ಬೆಳೆಯದಂತೆ ತೆಂಗಿನ ಗರಿ ಹಾಗೂ ಅಡಿಕೆ ಸಿಪ್ಪೆಗಳನ್ನು ಹಾಕಿದ್ದಾರೆ. ಇದೀಗ ಶ್ರಮಕ್ಕೆ ಪ್ರತಿಫಲ ಎಂಬಂತೆ ಬೆಳೆಗಳು ತಲೆಯೆತ್ತಿ ನಿಂತು ಕೊಯ್ಲಿಗೆ ಸಿದ್ದಗೊಂಡಿದೆ. ತಮ್ಮ ಮನೆಯ ಖರ್ಚು ಹಾಗೂ ತುಳುನಾಡಿನ ಧಾರ್ಮಿಕ ವಿಧಿವಿಧಾನಗಳಿಗೆ ಬೇಕಾದ ಭತ್ತವನ್ನು ಇವರು ಸ್ವತಃ ತಾವೇ ತಯಾರಿಸಿಕೊಂಡಿದ್ದಾರೆ.ಕೆಲಸ ಮಾಡಲು ಬೇರೆಯವರನ್ನು ಕರೆಯದೆ ತಾವಿಬ್ಬರೇ ಎಲ್ಲಾ ಸಿದ್ಧತೆ ಮಾಡಿಕೊಂಡ ಇವರಿಗೆ  ತಮ್ಮ ಮನೆಯವರೂ ಸಂಪೂರ್ಣ ಸಹಕಾರ ನೀಡಿದ್ದಾರೆ.

Advertisement

ಇವರು ಯಾವುದೇ ಕೀಟನಾಶಕ ಬಳಸದೆ ದನದ ಕೊಟ್ಟಿಗೆ ತೊಳೆದ ನೀರನ್ನೇ ಬೆಳೆಗೆ ಬಿಡುತ್ತಿದ್ದಾರೆ. ಕರಾವಳಿ ಪ್ರದೇಶದಲ್ಲಿ ಭತ್ತ ಬೆಳೆಯುವವರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದರ ಅನಿವಾರ್ಯತೆಯನ್ನು ತೋರಿಸುವ ಸಣ್ಣ ಪ್ರಯತ್ನವನ್ನೂ ಈ ಸಹೋದರರು ಮಾಡಿದ್ದಾರೆ. ನಾಣ್ಯ ಸಂಗ್ರಹಣೆ, ಕಬಡ್ಡಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡೆಗುವುದು ಇವರ ಹವ್ಯಾಸ.

Advertisement

 

ಬರಹ :  # ಲಾವಣ್ಯ. ಎಸ್. 
                 ಪತ್ರಿಕೋದ್ಯಮ ವಿದ್ಯಾರ್ಥಿನಿ 
                ಸಂತ ಫಿಲೋಮಿನಾ ಕಾಲೇಜು ದರ್ಬೆ -ಪುತ್ತೂರು

Advertisement

 

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

7 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

8 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

12 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

12 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

16 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago