Advertisement
Exclusive - Mirror Hunt

ಕೊರೋನಾ ರಜೆಯಲ್ಲಿ ಕೃಷಿಗಿಳಿದ ವಿದ್ಯಾರ್ಥಿಗಳು | ಕಾಲೇಜು ವಿದ್ಯಾರ್ಥಿಗಳಲ್ಲಿ ಬತ್ತದ ಕೃಷಿ ಉತ್ಸಾಹ

Share

ಕೊರೋನಾ ಅನೇಕರಿಗೆ ಸಂಕಷ್ಟ ಎಂದೆನಿಸಿತು. ಆದರೆ ಈ ಕುಟುಂಬ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಉತ್ಸಾಹ ತಂದಿತು. ಮನೆಯಂಗಳಲ್ಲಿ  ಭತ್ತದ ಕೃಷಿ ಮಾಡಿ ಕೃಷಿಯಲ್ಲೂ ವಿದ್ಯಾರ್ಥಿಗಳಿಗೆ ಆಸಕ್ತಿ ಬತ್ತಿಲ್ಲ ಎಂದು ತೋರಿಸಿದ್ದಾರೆ. ಈ ಕೊರೋನಾ ಪಾಸಿಟಿವ್‌ ಸ್ಟೋರಿ ನೀವು ಓದಬೇಕು. ಗ್ರಾಮೀಣ ಭಾಗದ  ಬದಲಾವಣೆಯ ಈ ಪ್ರತಿಬಿಂಬ ನಿಮ್ಮ ಮುಂದೆ..

 

 

ಕೊರೋನಾ ಸಂಕಷ್ಟ ಎಂದು ಕುಳಿತಿದ್ದರೆ ಈ ವಿದ್ಯಾರ್ಥಿಗಳು ಮೊಬೈಲ್‌ ನೋಡುತ್ತಾ ಕಾಲ ಕಳೆಯುತ್ತಿದ್ದರೇನೋ. ಆದರೆ           ‘ಮನಸ್ಸಿದ್ದರೆ ಮಾರ್ಗ’ ಎಂಬ ಗಾದೆ ಮಾತಿನಂತೆ  ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೂ ಇದೊಂದು ಉದಾಹರಣೆ. ಓದಿನ ನಡುವೆಯೂ ಬಿಡುವು ಮಾಡಿಕೊಂಡು ಭತ್ತ ಬೆಳೆದಿದ್ದು, ಇನ್ನೇನು ಕಟಾವಿಗೆ ಸಿದ್ದಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೇಶವ ಗೌಡ ಹಾಗೂ ನಿರ್ಮಲ ದಂಪತಿಯ ಅವಳಿ ಪುತ್ರರು ಭುವನ್‌ ಹಾಗೂ ಭವನ್‌. ಪ್ರಸ್ತುತ ಸಂತ ಫಿಲೋಮಿನಾ ಕಾಲೇಜಿನಲ್ಲಿ ತೃತೀಯ ವರ್ಷದ ಬಿಎಸ್ಸಿ ವಿಧ್ಯಾಭ್ಯಾಸವನ್ನು ಮಾಡಿಕೊಂಡಿರುವ ಇವರು ಕೋವಿಡ್ 19 ನಂತಹ ಸಂಕಷ್ಟದ ಸಮಯವನ್ನು ಭತ್ತ ಬೆಳೆಯುವ ಮೂಲಕ ಸದುಪಯೋಗಪಡಿಸಿಕೊಂಡಿದ್ದಾರೆ. ಹೆಚ್ಚಾಗಿ ಭತ್ತದ ಕೃಷಿಯನ್ನೇ ಅವಲಂಬಿಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಭತ್ತದ ಬೆಳೆ ಮರೆಯಾಗಿ ವಾಣಿಜ್ಯ ಬೆಳೆಗಳು ತಲೆ ಎತ್ತುತ್ತಿವೆ. ಇದರಿಂದಾಗಿ ಹಲವು ಜನರಿಗೆ ಭತ್ತದ ಕೃಷಿಯ ಬಗ್ಗೆ ಅರಿವೇ ಇಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಹೊಸ ತಲೆಮಾರಿನ ಜನರಿಗೆ ಭತ್ತ ಎಲ್ಲಿ ಬೆಳೆಯುತ್ತಾರೆ ಎಂಬುದರ  ಬಗ್ಗೆಯೇ ಸಂಶಯವಿದೆ. ಇಂತಹದ್ದೇ ಸಂಶಯ ತಮ್ಮಮನೆಯ ಪುಟ್ಟ ತಂಗಿಯಲ್ಲಿ ಮೂಡಿದಾಗ ಸ್ವತಃ ತಾವೇ ತಮ್ಮ ಮನೆಯ ಅಂಗಳದಲ್ಲಿ ಭತ್ತ ಬೆಳೆಯುವ ಮೂಲಕ ತಂಗಿಯ ಸಂಶಯವನ್ನು ದೂರಮಾಡಿದ್ದಾರೆ ಹಾಗೂ ಭತ್ತದ ಮಹತ್ವವನ್ನು ಯುವಜನತೆಗೆ ತಿಳಿಸಲು ಮುಂದಾಗಿದ್ದಾರೆ.

 

 

 

 

 

ಕಳೆದ ಮೂರು ವರ್ಷಗಳಿಂದ ಭತ್ತ ಬೆಳೆಯುವುದನ್ನು ಪ್ರಾರಂಭಿಸಿದ ಇವರು ಮನೆಯ ಅಂಗಳವನ್ನು ಸಮತಟ್ಟು ಮಾಡಿ, ಮಣ್ಣನ್ನು ಹದ ಮಾಡಿ, ಮಣ್ಣು ಕೊಚ್ಚಿ ಹೋಗದಂತೆ ಸುತ್ತಲೂ ಕಟ್ಟೆಯನ್ನು ಕಟ್ಟಿ ಭತ್ತದ ಕೃಷಿ ಮಾಡಿದ್ದಾರೆ. ಭತ್ತದ ಪೈರಿನ ಮಧ್ಯೆ ಹುಲ್ಲು ಬೆಳೆಯದಂತೆ ತೆಂಗಿನ ಗರಿ ಹಾಗೂ ಅಡಿಕೆ ಸಿಪ್ಪೆಗಳನ್ನು ಹಾಕಿದ್ದಾರೆ. ಇದೀಗ ಶ್ರಮಕ್ಕೆ ಪ್ರತಿಫಲ ಎಂಬಂತೆ ಬೆಳೆಗಳು ತಲೆಯೆತ್ತಿ ನಿಂತು ಕೊಯ್ಲಿಗೆ ಸಿದ್ದಗೊಂಡಿದೆ. ತಮ್ಮ ಮನೆಯ ಖರ್ಚು ಹಾಗೂ ತುಳುನಾಡಿನ ಧಾರ್ಮಿಕ ವಿಧಿವಿಧಾನಗಳಿಗೆ ಬೇಕಾದ ಭತ್ತವನ್ನು ಇವರು ಸ್ವತಃ ತಾವೇ ತಯಾರಿಸಿಕೊಂಡಿದ್ದಾರೆ.ಕೆಲಸ ಮಾಡಲು ಬೇರೆಯವರನ್ನು ಕರೆಯದೆ ತಾವಿಬ್ಬರೇ ಎಲ್ಲಾ ಸಿದ್ಧತೆ ಮಾಡಿಕೊಂಡ ಇವರಿಗೆ  ತಮ್ಮ ಮನೆಯವರೂ ಸಂಪೂರ್ಣ ಸಹಕಾರ ನೀಡಿದ್ದಾರೆ.

ಇವರು ಯಾವುದೇ ಕೀಟನಾಶಕ ಬಳಸದೆ ದನದ ಕೊಟ್ಟಿಗೆ ತೊಳೆದ ನೀರನ್ನೇ ಬೆಳೆಗೆ ಬಿಡುತ್ತಿದ್ದಾರೆ. ಕರಾವಳಿ ಪ್ರದೇಶದಲ್ಲಿ ಭತ್ತ ಬೆಳೆಯುವವರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದರ ಅನಿವಾರ್ಯತೆಯನ್ನು ತೋರಿಸುವ ಸಣ್ಣ ಪ್ರಯತ್ನವನ್ನೂ ಈ ಸಹೋದರರು ಮಾಡಿದ್ದಾರೆ. ನಾಣ್ಯ ಸಂಗ್ರಹಣೆ, ಕಬಡ್ಡಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡೆಗುವುದು ಇವರ ಹವ್ಯಾಸ.

 

ಬರಹ :  # ಲಾವಣ್ಯ. ಎಸ್. 
                 ಪತ್ರಿಕೋದ್ಯಮ ವಿದ್ಯಾರ್ಥಿನಿ 
                ಸಂತ ಫಿಲೋಮಿನಾ ಕಾಲೇಜು ದರ್ಬೆ -ಪುತ್ತೂರು

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

14 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago