Advertisement
ಸುದ್ದಿಗಳು

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

Share

ಕೃಷಿ, ಯುವಜನತೆ ಮತ್ತು ಆರ್ಥಿಕತೆಯ ನಡುವಿನ ನಂಟನ್ನು ಬಲಪಡಿಸುವ ಉದ್ದೇಶದಿಂದ “ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ – ಎಡಿಷನ್ 2” ಕಾರ್ಯಕ್ರಮವನ್ನು ಜೂನ್ 14 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿದೆ.

ಫುಡ್ ಚೈನ್ ಕ್ಯಾಂಪೇನ್ ವತಿಯಿಂದ ಆಯೋಜಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ಗೌಶುಭಂ ಫೌಂಡೇಶನ್ ಸಹಯೋಗ ನೀಡುತ್ತಿದೆ. ವಿದ್ಯಾರ್ಥಿಗಳು, ರೈತರು, ಕೃಷಿ ತಜ್ಞರು ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಕೃಷಿ, ಪರಿಸರ ಮತ್ತು ಗ್ರಾಮೀಣ ಆರ್ಥಿಕತೆಯ ಮಹತ್ವವನ್ನು ತಿಳಿಸುವ ಉದ್ದೇಶವನ್ನು ಕಾರ್ಯಕ್ರಮ ಹೊಂದಿದೆ.

ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಗೌಡ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಹಾಗೂ ಇನ್‌ಸ್ಟಿಟ್ಯೂಷನ್ ಆಫ್ ಅಗ್ರಿಕಲ್ಚರಲ್ ಟೆಕ್ನಾಲಜಿಸ್ಟ್ಸ್ ಅಧ್ಯಕ್ಷ ಡಾ. ಎ.ಬಿ. ಪಾಟೀಲ್ ಭಾಗವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಪಿ.ಎಸ್. ಕಂಠರಾಜು ಐಎಎಸ್, ಕೆ. ಅಮರನಾರಾಯಣ ಐಎಎಸ್ (ನಿವೃತ್ತ) ಉಪಸ್ಥಿತರಿರುವರು. ವಿಶೇಷ ಅತಿಥಿಗಳಾಗಿ ನರೇಂದ್ರ, ಡಾ.ಶೌರೀಶ್ ಹೆಗ್ಡೆ ಮತ್ತು ಅಲೆನ್ ಜೋಸೆಫ್ ಭಾಗವಹಿಸಲಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫುಡ್ ಚೈನ್ ಕ್ಯಾಂಪೇನ್ ಸಂಸ್ಥಾಪಕ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಯುವ ಘಟಕದ ಅಧ್ಯಕ್ಷ ಯತೀಶ್ ತುಕಾರಂ ವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ರೈತರು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೃಷಿಯಿಂದ ಯುವಜನತೆ ದೂರವಾಗುತ್ತಿರುವುದು ಮತ್ತು ರೈತ ಸಮುದಾಯದ ಸಮಸ್ಯೆಗಳು ನಗರ ಪ್ರದೇಶಗಳಿಗೆ ಸರಿಯಾಗಿ ತಲುಪದಿರುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ “ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್” ಮಾದರಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಮತ್ತು ರೈತರ ನಡುವೆ ನೇರ ಸಂಪರ್ಕ ಸೇತುವೆ ನಿರ್ಮಿಸುವ ಪ್ರಯತ್ನವಾಗಿವೆ.

ಈ ಕಾರ್ಯಕ್ರಮದ “Nature, Youth and Economy” ಎಂಬ ಥೀಮ್ ಕೂಡ ಇಂದಿನ ಸಂದರ್ಭಕ್ಕೆ ಅತ್ಯಂತ ಪ್ರಸ್ತುತವಾಗಿದೆ. ಪ್ರಕೃತಿ ಸಂರಕ್ಷಣೆ, ಯುವಕರ ಪಾಲ್ಗೊಳ್ಳುವಿಕೆ ಮತ್ತು ಕೃಷಿ ಆಧಾರಿತ ಆರ್ಥಿಕತೆಯ ನಡುವಿನ ಸಂಬಂಧವನ್ನು ಅರ್ಥಮಾಡಿಕೊಳ್ಳುವುದು ಭವಿಷ್ಯದ ಸುಸ್ಥಿರ ಅಭಿವೃದ್ಧಿಗೆ ಅಗತ್ಯವಾಗಿದೆ. ವಿಶೇಷವಾಗಿ ಕೃಷಿ ಕೇವಲ ಆಹಾರ ಉತ್ಪಾದನೆಯ ಕ್ಷೇತ್ರವಲ್ಲ, ಅದು ಉದ್ಯೋಗ, ಪರಿಸರ ಸಂರಕ್ಷಣೆ ಹಾಗೂ ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರ ಎಂಬ ಸಂದೇಶವನ್ನು ಯುವಪೀಳಿಗೆಗೆ ತಲುಪಿಸುವ ಅವಕಾಶ ಈ ಕಾರ್ಯಕ್ರಮ ಒದಗಿಸುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರ ಸಮಸ್ಯೆಗಳು, ಕೃಷಿಯಲ್ಲಿನ ಹೊಸ ತಂತ್ರಜ್ಞಾನಗಳು ಹಾಗೂ ಕೃಷಿ ಉದ್ಯಮದ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರೆ ಭವಿಷ್ಯದಲ್ಲಿ ಕೃಷಿ ಕ್ಷೇತ್ರಕ್ಕೆ ಹೊಸ ಚಿಂತನೆ ಮತ್ತು ನಾಯಕತ್ವ ಸಿಗುವ ಸಾಧ್ಯತೆ ಹೆಚ್ಚುತ್ತದೆ. ಹೀಗಾಗಿ ಈ ವಾಕಥಾನ್ ಕೇವಲ ಒಂದು ನಡಿಗೆ ಕಾರ್ಯಕ್ರಮವಲ್ಲ, ರೈತರು ಮತ್ತು ಯುವಜನತೆಯ ನಡುವೆ ಸಂವಾದ ಹಾಗೂ ಜಾಗೃತಿ ಮೂಡಿಸುವ ಸಾಮಾಜಿಕ ಚಳವಳಿಯ ಪ್ರಯತ್ನ ಇದಾಗಿದೆ.

The Students Farmers Walkathon Edition 2 will be held on June 14, 2026, at Freedom Park, Bengaluru, focusing on the theme “Nature, Youth and Economy.” Organized by Food Chain Campaign and powered by Gaushubham Foundation, the event aims to connect students and farmers while promoting awareness about agriculture, environment, and rural economy.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

18 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago