ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಣಿವೆ ಕೊಪ್ಪಲು ಅರಣ್ಯ ಪ್ರದೇಶದಲ್ಲಿಂದು ತಾಯಿಯ ಹೆಸರಿನಲ್ಲೊಂದು ಒಂದು ಗಿಡ ಎಂಬ ಅಭಿಯಾನಕ್ಕೆ ಉಪ ಅರಣ್ಯಾಧಿಕಾರಿ ಎಸ್.ಸೋಮ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಶ್ರಾವಣಿ, ತಾಯಿ ಮಗುವನ್ನು ಪೋಷಣೆ ಮಾಡುವ ರೀತಿಯಲ್ಲಿ ಭೂಮಿಯನ್ನು ನಾವು ಸಂರಕ್ಷಣೆ ಮಾಡಬೇಕಿದೆ. ತಾಯದಿಂದರ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟಿದ್ದು, ಪೋಷಣೆ ಮಾಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು. ಅಭಿಯಾನದಲ್ಲಿ ಉಪ ಅರಣ್ಯಾಧಿಕಾರಿ ಯೋಗೇಶ್, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ, ಗಿಡ ನೆಡುವ ಕುರಿತು ವಿದ್ಯಾರ್ಥಿಗಳಿಗೆ ಅರಣ್ಯಾಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿ ಮನೋಜ್, ಅಭಿಯಾನದ ಅಂಗವಾಗಿ ಒಂದು ಸಾವಿರ ಗಿಡಗಳನ್ನು ನೆಡುವ ಮೂಲಕ ಪರಿಸರ ಕಾಳಜಿ ವಹಿಸಲಾಗುತ್ತಿದೆ ಎಂದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…