Advertisement
MIRROR FOCUS

ಓದು ಎಷ್ಟು ಮುಖ್ಯವೋ… ಛಲ, ಶ್ರಮ, ಪರಿಶ್ರಮ ಮುಖ್ಯವೂ ಅಷ್ಟೇ ಮುಖ್ಯ | ಕೋಳಿ ವ್ಯಾಪಾರದಿಂದ 2 ತಿಂಗಳಿಗೆ ₹4 ಲಕ್ಷ ಸಂಪಾದಿಸುವ ಯುವಕ

Share

ವಿದ್ಯೆ ಅತೀ ಅಗತ್ಯ. ಆದರೆ ವಿದ್ಯೆ(Education) ಇಲ್ಲದಿದ್ದರೇನು..? ಭೂಮಿ ತಾಯಿ, ನಂಬಿಕೆ, ಶ್ರದ್ಧೆ, ಶ್ರಮ ಎಂದೂ ಕೈಬಿಡುವುದಿಲ್ಲ ಎನ್ನುವುದೂ ಅಷ್ಟೇ ಸತ್ಯ. ಪರಿಶ್ರಮ ಒಂದಿದ್ದರೆ ಜೀವನದಲ್ಲಿ(Life) ಏನು ಬೇಕಾದರೂ ಸಾಧಿಸಬಹುದು. ನಮ್ಮ ದೇಶದಲ್ಲಿ ರೈತರು(Farmer)ಕೃಷಿಯ(Agriculture) ಜೊತೆಗೆ ಕೆಲವು ಪೂರಕ ವ್ಯಾಪಾರ ಮಾಡುತ್ತಾರೆ. ಅದರಲ್ಲಿ ಕೋಳಿ ಸಾಕಾಣಿಕೆಯೂ(poultry farming) ಒಂದು. ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡವರು ಹೆಚ್ಚಿನ ಆದಾಯವನ್ನೂ ಪಡೆಯುತ್ತಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಂದೀಪ್ ಮತ್ಸಾಗರ್ ಎಂಬಾತ ಕೋಳಿ ವ್ಯಾಪಾರ ಆರಂಭಿಸಿ ಇಂದು ಲಕ್ಷಗಟ್ಟಲೆ ಆದಾಯ ಗಳಿಸುತ್ತಿದ್ದಾರೆ. ಸಂದೀಪ್ ಮತ್ಸಾಗರ್ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವೈಜಾಪುರ ತಾಲೂಕಿನ ಜರುಲ್ ಎಂಬ ಸಣ್ಣ ಹಳ್ಳಿಯವರು. ಸಂದೀಪ್ ತಂದೆ ತಾಯಿ ಇಬ್ಬರೂ ಕೃಷಿ ಕೆಲಸ ಮಾಡುತ್ತಾರೆ. ಸಂದೀಪ್ ಓದಿದ್ದು 12ನೇ ತರಗತಿವರೆಗೆ ಮಾತ್ರ. ಮುಂದೆ ಉದ್ಯೋಗದ ಗ್ಯಾರಂಟಿ ಇಲ್ಲದ ಕಾರಣ ಏನಾದರೂ ವ್ಯಾಪಾರ ಮಾಡಲು ನಿರ್ಧರಿಸಿದರು.ಅವರು ಆರಂಭದಲ್ಲಿ ಬಟ್ಟೆ ಅಂಗಡಿಯನ್ನು ಪ್ರಾರಂಭಿಸಿದರು. ಆದರೆ ಈ ಬಟ್ಟೆ ಅಂಗಡಿಯಲ್ಲಿ ಅವರು ಬಯಸಿದ ಯಶಸ್ಸು ಸಿಗಲಿಲ್ಲ. ಅಲ್ಲದೆ ಕೋವಿಡ್​ ಲಾಕ್‌ಡೌನ್‌ನಲ್ಲಿ ಅವರು ಅಂಗಡಿಯನ್ನು ಮುಚ್ಚಬೇಕಾಯಿತು. ಈ ಅಂಗಡಿ ಮುಚ್ಚಿರುವುದರಿಂದ ಈಗ ಏನು ವ್ಯಾಪಾರ ಮಾಡಬೇಕು ಎಂಬ ಪ್ರಶ್ನೆ ಅವರ ಮುಂದೆ ಎದ್ದಿತು.

Advertisement

ಸ್ನೇಹಿತರ, ಹಿತೈಷಿಗಳು, ತಮ್ಮ ಹಳ್ಳಿಯ ಜನರಲ್ಲಿ ಯಾವ ವ್ಯಾಪಾರ ಶುರುಮಾಡಬೇಕು ಎಂದು ಕೇಳಿದಾಗ ಎಲ್ಲರೂ ಕೋಳಿ ವ್ಯಾಪಾರ ಮಾಡುವಂತೆ ಸಲಹೆ ನೀಡಿದರು. ಸಂದೀಪ್‌ಗೆ ಕೋಳಿ ವ್ಯಾಪಾರವನ್ನು ಹೇಗೆ ಪ್ರಾರಂಭಿಸಬೇಕು ಎಂದು ತಿಳಿದಿರಲಿಲ್ಲ. ಇದಕ್ಕಾಗಿ ಅವರು ಎಲ್ಲಾ ಕಡೆ ಹೋಗಿ ವಿಚಾರಣೆಗಳನ್ನು ಮಾಡಿದರು. ಅವರು ಇತರ ಕೋಳಿ ಫಾರಂಗಳನ್ನು ನೋಡಿದರು ಮತ್ತು ನಂತರ ಅವರು ಕೋಳಿ ಫಾರ್ಮ್ ಅನ್ನು ಪ್ರಾರಂಭಿಸಬೇಕು ಎಂದು ನಿರ್ಧರಿಸಿದರು. ಸಂದೀಪ್ ತಮ್ಮ ಜಮೀನಿನಲ್ಲಿ ಎಸಿ ಪೌಲ್ಟ್ರಿ ಫಾರಂ ಆರಂಭಿಸಲು ನಿರ್ಧರಿಸಿದರು.

ಇದಕ್ಕಾಗಿ ಅವರು ತಮ್ಮ ಸಹೋದರ ಮತ್ತು ತಂದೆಯ ಸಹಾಯದಿಂದ ಈ ಕೋಳಿ ಫಾರ್ಮ್ ಅನ್ನು ಪ್ರಾರಂಭಿಸಿದರು. ಸಂದೀಪ್‌ಗೆ ಎರಡು ಶೆಡ್‌ಗಳ ನಿರ್ಮಿಸಿಕೊಂಡರು. ಈ ಸ್ಥಳವು 30 ರಿಂದ 32 ಸಾವಿರ ಕೋಳಿಗಳನ್ನು ಸಾಕುವ ಸಾಮರ್ಥ್ಯವನ್ನು ಹೊಂದಿದೆ. ಕುತೂಹಲಕಾರಿ ಎಂದರೆ ಈ ಕೋಳಿ ಫಾರ್ಮ್ ಎಸಿ ಯಿಂದ ಕೂಡಿದೆ. ಈ ಪಕ್ಷಿಗಳು ಎರಡು ತಿಂಗಳಲ್ಲಿ ಸಿದ್ಧವಾಗುತ್ತವೆ. ತದನಂತರ ಅವರು ಅದನ್ನು ಟೈ ಅಪ್ ಮಾಡಿಕೊಂಡಿರುವ ಕಂಪನಿಗೆ ಕಳುಹಿಸುತ್ತಾರೆ. ಇದರಿಂದ ಪ್ರತಿ 2 ತಿಂಗಳಿಗೆ 4ರಿಂದ 5 ಲಕ್ಷ ಆದಾಯ ಪಡೆಯುತ್ತಾರೆ.

Advertisement

ನಾನು ಈ ವ್ಯವಹಾರವನ್ನು ಪ್ರಾರಂಭಿಸಿದಾಗ, ಆರಂಭದಲ್ಲಿ ನಾನು ದೊಡ್ಡ ನಷ್ಟವನ್ನು ಅನುಭವಿಸಿದ್ದೆ. ಆದರೆ ಕ್ರಮೇಣ ಈ ಇಡೀ ವ್ಯವಹಾರದ ಬಗ್ಗೆ ತಿಳಿದುಕೊಂಡು ಈಗ ಲಕ್ಷಗಟ್ಟಲೆ ಆದಾಯ ಗಳಿಸುತ್ತಿದ್ದೇನೆ ಎಂದು ರೈತ ಸಂದೀಪ್​ ಮತ್ಸಾಗರ ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

5 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

5 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

18 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago