ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ನಿಮ್ಹಾನ್ಸ್ ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ತಿಳಿಸಿದ್ದಾರೆ. 2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4 ಸಾವಿರದ 331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ 3 ಸಾವಿರದ 99 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರ 3ಸಾವಿರದ 5 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೇಳಿದ್ದಾರೆ. ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…