MIRROR FOCUS

ಅಡಿಕೆ ಸಿಪ್ಪೆಯ ಅಂಶಗಳು ಬ್ಯಾಟರಿ ತಂತ್ರಜ್ಞಾನಕ್ಕೆ ಬಳಕೆ | ಅಡಿಕೆ ಸಿಪ್ಪೆಯ ಪರ್ಯಾಯ ಬಳಕೆಯ ಹೆಜ್ಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಸಿಪ್ಪೆಯ ಹೊಸ ಬಳಕೆಯ ಬಗ್ಗೆ ಕೆಲವು ವರ್ಷಗಳಿಂದ ಅಧ್ಯಯನ ನಡೆಯುತ್ತಿತ್ತು. ಇದೀಗ ಸಂಶೋಧಕರ ತಂಡವು ಅಡಿಕೆ ಸಿಪ್ಪೆಯ ಅಂಶಗಳನ್ನು ಬ್ಯಾಟರಿ ತಂತ್ರಜ್ಞಾನದಲ್ಲಿ ಬಳಕೆ ಮಾಡುವ ಬಗ್ಗೆ ಅಧ್ಯಯನ ಮಾಡಿದ್ದಾರೆ. ಇದು ಹೊಸ ಸಾಧ್ಯತೆಯನ್ನು ತೆರೆದಿರಿಸಿದೆ.

Advertisement

ಹೊಸ ಬೆಳೆವಣಿಗೆಯೊಂದರಲ್ಲಿ ಅಡಿಕೆ ಸಿಪ್ಪೆಯೂ ಈಗ ಬಳಕೆಯ ಕಡೆಗೆ ಹೆಜ್ಜೆ ಹಾಕುತ್ತಿದೆ. ಭವಿಷ್ಯದಲ್ಲಿ ಅಡಿಕೆ ಸಿಪ್ಪೆಯ ಬೇಡಿಕೆಯ ಸಾಧ್ಯತೆಯನ್ನು ತೆರೆದಿರಿಸಿದೆ. ಸಂಶೋಧಕರ ತಂಡವು ಅಡಿಕೆಯ ಸಿಪ್ಪೆಯಿಂದ ನ್ಯಾನೊ ಸಂಯುಕ್ತಗಳನ್ನು ಯಶಸ್ವಿಯಾಗಿ ಪ್ರತ್ಯೇಕಿಸಿ, ಬ್ಯಾಟರಿ ತಂತ್ರಜ್ಞಾನದಲ್ಲಿ ಪ್ರಗತಿಗೆ ದಾರಿ ಮಾಡಿಕೊಟ್ಟಿದೆ. ತಂಡವು ಲಿಥಿಯಂ-ಐಯಾನ್ ಬ್ಯಾಟರಿಗಳಲ್ಲಿ ಬಳಸಲು ನ್ಯಾನೊ ಸಿಲಿಕಾನ್ ಅನ್ನು ಅಡಿಕೆ ಸಿಪ್ಪೆಯಿಂದ ಉತ್ಪಾದಿಸಿದೆ. ಅಡಿಕೆ ಸಿಪ್ಪೆಯಿಂದ ಬೇರ್ಪಟ್ಟ ಸಿಲಿಕಾನ್ ನ್ಯಾನೊಕಾಂಪೊಸಿಟ್‌ಗಳ ವಿಶಿಷ್ಟ ಆಕಾರ ಮತ್ತು ರಚನೆಯು ಬ್ಯಾಟರಿಯು ಬಹು ಕಾಲದ ಚಾರ್ಜ್ ಮತ್ತು ಡಿಸ್ಚಾರ್ಜ್ ಗಳಿಗೆ ಒಳಗಾಗಲು ಅನುವು ಮಾಡಿಕೊಡುತ್ತದೆ ಎನ್ನುವುದು ಸಂಶೋಧನೆಯಿಂದ ತಿಳಿದಿದೆ.

ಕೇರಳದ ಕಣ್ಣೂರು ವಿಶ್ವವಿದ್ಯಾನಿಲಯದ ಸ್ವಾಮಿ ಅನಂತ ತೀರ್ಥ ಕ್ಯಾಂಪಸ್‌ನ ಸ್ಕೂಲ್ ಆಫ್ ಕೆಮಿಕಲ್ ಸೈನ್ಸಸ್‌ನ ಪ್ರಮುಖ ಸಂಶೋಧಕರಾದ ಅಂಜಲಿ ಪರವನ್ನೂರ್ ಮತ್ತು ಬೈಜು ವಿಜಯನ್ ಅವರ ಪ್ರಕಾರ, ಈ ಸಿಲಿಕಾನ್ ಆಧಾರಿತ ಲಿಥಿಯಂ ಬ್ಯಾಟರಿಗಳು ಪ್ರಸ್ತುತ ಪ್ರಚಲಿತದಲ್ಲಿರುವ ಗ್ರ್ಯಾಫೈಟ್ ಆಧಾರಿತ ಎಲೆಕ್ಟ್ರೋಡ್‌ಗಳಿಗೆ ಹೋಲಿಸಿದರೆ ನಾಲ್ಕು ಪಟ್ಟು ಶೇಖರಣಾ ಸಾಮರ್ಥ್ಯವನ್ನು ಪ್ರದರ್ಶಿಸುತ್ತವೆ.

ಅಡಿಕೆ ಸಿಪ್ಪೆಯನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಮೂಲಕ, ಈ ತಂಡವು ಕೃಷಿ ತ್ಯಾಜ್ಯವನ್ನು ನಿರ್ವಹಿಸಲು ಪ್ರಾಯೋಗಿಕ ಪರಿಹಾರವನ್ನು ನೀಡಿದೆ, ಮಾತ್ರವಲ್ಲ ಪರಿಸರ ಸ್ನೇಹಿಯಾದ ಮಹತ್ತರವಾದ ಹೆಜ್ಜೆಯೂ ಆಗಿದೆ.

A new use for Arecanut husks has been under study for a few years. Now a team of researchers has studied the use of Arecanut shell components in battery technology. This opens up new possibilities.

Advertisement

Source : The Hindu

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

15 minutes ago

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

6 hours ago

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

9 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

15 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

23 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

23 hours ago