Advertisement
MIRROR FOCUS

ಅಡಿಕೆ ಸಿಪ್ಪೆಯ ಅಂಶಗಳು ಬ್ಯಾಟರಿ ತಂತ್ರಜ್ಞಾನಕ್ಕೆ ಬಳಕೆ | ಅಡಿಕೆ ಸಿಪ್ಪೆಯ ಪರ್ಯಾಯ ಬಳಕೆಯ ಹೆಜ್ಜೆ |

Share

ಅಡಿಕೆ ಸಿಪ್ಪೆಯ ಹೊಸ ಬಳಕೆಯ ಬಗ್ಗೆ ಕೆಲವು ವರ್ಷಗಳಿಂದ ಅಧ್ಯಯನ ನಡೆಯುತ್ತಿತ್ತು. ಇದೀಗ ಸಂಶೋಧಕರ ತಂಡವು ಅಡಿಕೆ ಸಿಪ್ಪೆಯ ಅಂಶಗಳನ್ನು ಬ್ಯಾಟರಿ ತಂತ್ರಜ್ಞಾನದಲ್ಲಿ ಬಳಕೆ ಮಾಡುವ ಬಗ್ಗೆ ಅಧ್ಯಯನ ಮಾಡಿದ್ದಾರೆ. ಇದು ಹೊಸ ಸಾಧ್ಯತೆಯನ್ನು ತೆರೆದಿರಿಸಿದೆ.

ಹೊಸ ಬೆಳೆವಣಿಗೆಯೊಂದರಲ್ಲಿ ಅಡಿಕೆ ಸಿಪ್ಪೆಯೂ ಈಗ ಬಳಕೆಯ ಕಡೆಗೆ ಹೆಜ್ಜೆ ಹಾಕುತ್ತಿದೆ. ಭವಿಷ್ಯದಲ್ಲಿ ಅಡಿಕೆ ಸಿಪ್ಪೆಯ ಬೇಡಿಕೆಯ ಸಾಧ್ಯತೆಯನ್ನು ತೆರೆದಿರಿಸಿದೆ. ಸಂಶೋಧಕರ ತಂಡವು ಅಡಿಕೆಯ ಸಿಪ್ಪೆಯಿಂದ ನ್ಯಾನೊ ಸಂಯುಕ್ತಗಳನ್ನು ಯಶಸ್ವಿಯಾಗಿ ಪ್ರತ್ಯೇಕಿಸಿ, ಬ್ಯಾಟರಿ ತಂತ್ರಜ್ಞಾನದಲ್ಲಿ ಪ್ರಗತಿಗೆ ದಾರಿ ಮಾಡಿಕೊಟ್ಟಿದೆ. ತಂಡವು ಲಿಥಿಯಂ-ಐಯಾನ್ ಬ್ಯಾಟರಿಗಳಲ್ಲಿ ಬಳಸಲು ನ್ಯಾನೊ ಸಿಲಿಕಾನ್ ಅನ್ನು ಅಡಿಕೆ ಸಿಪ್ಪೆಯಿಂದ ಉತ್ಪಾದಿಸಿದೆ. ಅಡಿಕೆ ಸಿಪ್ಪೆಯಿಂದ ಬೇರ್ಪಟ್ಟ ಸಿಲಿಕಾನ್ ನ್ಯಾನೊಕಾಂಪೊಸಿಟ್‌ಗಳ ವಿಶಿಷ್ಟ ಆಕಾರ ಮತ್ತು ರಚನೆಯು ಬ್ಯಾಟರಿಯು ಬಹು ಕಾಲದ ಚಾರ್ಜ್ ಮತ್ತು ಡಿಸ್ಚಾರ್ಜ್ ಗಳಿಗೆ ಒಳಗಾಗಲು ಅನುವು ಮಾಡಿಕೊಡುತ್ತದೆ ಎನ್ನುವುದು ಸಂಶೋಧನೆಯಿಂದ ತಿಳಿದಿದೆ.

ಕೇರಳದ ಕಣ್ಣೂರು ವಿಶ್ವವಿದ್ಯಾನಿಲಯದ ಸ್ವಾಮಿ ಅನಂತ ತೀರ್ಥ ಕ್ಯಾಂಪಸ್‌ನ ಸ್ಕೂಲ್ ಆಫ್ ಕೆಮಿಕಲ್ ಸೈನ್ಸಸ್‌ನ ಪ್ರಮುಖ ಸಂಶೋಧಕರಾದ ಅಂಜಲಿ ಪರವನ್ನೂರ್ ಮತ್ತು ಬೈಜು ವಿಜಯನ್ ಅವರ ಪ್ರಕಾರ, ಈ ಸಿಲಿಕಾನ್ ಆಧಾರಿತ ಲಿಥಿಯಂ ಬ್ಯಾಟರಿಗಳು ಪ್ರಸ್ತುತ ಪ್ರಚಲಿತದಲ್ಲಿರುವ ಗ್ರ್ಯಾಫೈಟ್ ಆಧಾರಿತ ಎಲೆಕ್ಟ್ರೋಡ್‌ಗಳಿಗೆ ಹೋಲಿಸಿದರೆ ನಾಲ್ಕು ಪಟ್ಟು ಶೇಖರಣಾ ಸಾಮರ್ಥ್ಯವನ್ನು ಪ್ರದರ್ಶಿಸುತ್ತವೆ.

ಅಡಿಕೆ ಸಿಪ್ಪೆಯನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಮೂಲಕ, ಈ ತಂಡವು ಕೃಷಿ ತ್ಯಾಜ್ಯವನ್ನು ನಿರ್ವಹಿಸಲು ಪ್ರಾಯೋಗಿಕ ಪರಿಹಾರವನ್ನು ನೀಡಿದೆ, ಮಾತ್ರವಲ್ಲ ಪರಿಸರ ಸ್ನೇಹಿಯಾದ ಮಹತ್ತರವಾದ ಹೆಜ್ಜೆಯೂ ಆಗಿದೆ.

A new use for Arecanut husks has been under study for a few years. Now a team of researchers has studied the use of Arecanut shell components in battery technology. This opens up new possibilities.

Source : The Hindu

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

7 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

10 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

19 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

20 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

21 hours ago