ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಆವರಿಸಿರುವ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ಕೇಂದ್ರ ಕೃಷಿ ಇಲಾಖೆಯ ತಜ್ಞರ ತಂಡವೊಂದು ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದೆ.
ನಾಲ್ಕು ದಿನಗಳ ಹಿಂದೆ ಸಂಸದ ಶ್ರೇಯಸ್ ಪಟೇಲ್, ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ರೋಗದ ಬಗ್ಗೆ ಅಧ್ಯಯನ ಮಾಡಿ ರೋಗಕ್ಕೆ ಕಾರಣ ಹಾಗೂ ಅದರ ಬಗ್ಗೆ ಮಾಹಿತಿ ನೀಡಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಾಸನಕ್ಕೆ ಆಗಮಿಸಿದ ತಂಡವು ಹೊಳೆನರಸೀಪುರ, ಆಲೂರು, ಬೇಲೂರು, ಚನ್ನರಾಯಪಟ್ಟಣ, ಅರಸೀಕೆರೆ ಸೇರಿದಂತೆ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮೆಕ್ಕೆಜೋಳ ಬೆಳೆಗಾರರೊಂದಿಗೆ ಸಂವಾದ ನಡೆಸಿದ ತಜ್ಞರ ತಂಡ ಹಾನಿಗೊಳಗಾದ ಸಸ್ಯಗಳ ಮಾದರಿಗಳನ್ನು ಪ್ರಯೋಗಾಲಯ ವಿಶ್ಲೇಷಣೆಗಾಗಿ ಸಂಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್ ವಿಜ್ಞಾನಿಗಳ ತಂಡವು ರೋಗದ ನಿಖರ ಕಾರಣ ಗುರುತಿಸುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…