ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಆವರಿಸಿರುವ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ಕೇಂದ್ರ ಕೃಷಿ ಇಲಾಖೆಯ ತಜ್ಞರ ತಂಡವೊಂದು ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದೆ.
ನಾಲ್ಕು ದಿನಗಳ ಹಿಂದೆ ಸಂಸದ ಶ್ರೇಯಸ್ ಪಟೇಲ್, ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ರೋಗದ ಬಗ್ಗೆ ಅಧ್ಯಯನ ಮಾಡಿ ರೋಗಕ್ಕೆ ಕಾರಣ ಹಾಗೂ ಅದರ ಬಗ್ಗೆ ಮಾಹಿತಿ ನೀಡಲು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಾಸನಕ್ಕೆ ಆಗಮಿಸಿದ ತಂಡವು ಹೊಳೆನರಸೀಪುರ, ಆಲೂರು, ಬೇಲೂರು, ಚನ್ನರಾಯಪಟ್ಟಣ, ಅರಸೀಕೆರೆ ಸೇರಿದಂತೆ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮೆಕ್ಕೆಜೋಳ ಬೆಳೆಗಾರರೊಂದಿಗೆ ಸಂವಾದ ನಡೆಸಿದ ತಜ್ಞರ ತಂಡ ಹಾನಿಗೊಳಗಾದ ಸಸ್ಯಗಳ ಮಾದರಿಗಳನ್ನು ಪ್ರಯೋಗಾಲಯ ವಿಶ್ಲೇಷಣೆಗಾಗಿ ಸಂಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್ ವಿಜ್ಞಾನಿಗಳ ತಂಡವು ರೋಗದ ನಿಖರ ಕಾರಣ ಗುರುತಿಸುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…