ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಎಸ್.ಕಾಲೇಜು ಮತ್ತು ಎಸ್.ಎಸ್.ಪಿ.ಯು. ಕಾಲೇಜಿನ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕಳೆದ ಕೆಲ ತಿಂಗಳುಗಳಿಂದ ವೇತನ ಬಾಕಿಯಾಗಿತ್ತು. ಈ ಬಗ್ಗೆ ಹಲವು ಬಾರಿ ಆಡಳಿತ ಮಂಡಳಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ವೇತನ ಪಾವತಿಗೆ ಕ್ರಮ ಆಗಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಸಮಸ್ಯೆಗೆ ಸ್ಪಂದಿಸಿದ್ದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾನ ಸಮಿತಿ ಮಾಜಿ ಸದಸ್ಯ ಹಾಗೂ ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಅವರು ಉಪನ್ಯಾಸಕರ ಸಂಕಷ್ಟದ ಬಗ್ಗೆ ಮಾಹಿತಿ ಪಡೆದಿದ್ದರು. ಈ ಬಗ್ಗೆ ಮುತುವರ್ಜಿ ವಹಿಸಿದ ಮಹೇಶ್ ಕುಮಾರ್ ಅವರು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದ್ದರು. ಸಮಸ್ಯೆಗೆ ಸ್ಪಂದಿಸಿದ ಸಭಾಧ್ಯಕ್ಷ ಯು ಟಿ ಖಾದರ್ ಅವರು ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಂಡಿದ್ದರು.
ಕಲ್ಮಡ್ಕ ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಅವರು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಕಾಳಜಿಯಿಂದ ಕೆಲಸ ಮಾಡುತ್ತಿದ್ದಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…