Advertisement
ಸುದ್ದಿಗಳು

ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ | ಕಲ್ಲೇರಿ ಸೇತುವೆ ಉದ್ಘಾಟನೆ | ರಸ್ತೆ ಚರಂಡಿಗೆ ಬೇಕಿದೆ ಕಾಯಕಲ್ಪ |

Share

ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯ ನಿಂತಿಕಲ್ ಸಮೀಪದ ಕಲ್ಲೇರಿ ಅಪಘಾತ ವಲಯದಲ್ಲಿ ರೂ. 1.25 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾದ ಸೇತುವೆಯನ್ನು ಭಾನುವಾರ ಸಚಿವ ಎಸ್‌ ಅಂಗಾರ ಉದ್ಘಾಟಿಸಿದರು.  

Advertisement
Advertisement
Advertisement
Advertisement

ಅಪಘಾತ ವಲಯವಾಗಿ ಹಲವು ಸಮಯಗಳಿಂದ ಗಮನ ಸೆಳೆದಿದ್ದ ಈ ಪ್ರದೇಶದಲ್ಲಿ ನೂತನವಾಗಿ ಸೇತುವೆ ಹಾಗೂ ಸಂಪರ್ಕ ರಸ್ತೆ ನಿರ್ಮಾಣವಾಗಿ ಸಾರ್ವಜನಿಕ ಉಪಯೋಗಕ್ಕೆ ತೆರೆದುಕೊಂಡಿದೆ. ಕಾಮಗಾರಿ ಮುಗಿದರೂ ವಾಹನ ಸಂಚಾರಕ್ಕೆ ಮುಕ್ತವಾಗಿರಲಿಲ್ಲ. ಈಚೆಗೆ ರಸ್ತೆ ತಡೆಗೆ ಇರಿಸಿದ್ದ ಮರಳಿನ ಚೀಲದಿಂದಲೇ ಅಪಾಯ ಉಂಟಾದ ವೇಳೆ ಸ್ಥಳೀಯರು ಇಲಾಖೆಯನ್ನು ಎಚ್ಚರಿಸಿದ್ದರು. ಇದೀಗ ಸೇತುವೆ ಹಾಗೂ ರಸ್ತೆ ಉದ್ಘಾಟನೆಗೊಂಡಿದೆ. ಉದ್ಘಾಟನೆ ವೇಳೆ ಸ್ಥಳೀಯ ಮುಖಂಡರು, ಇಲಾಖಾ ಅಧಿಕಾರಿಗಳು ಇದ್ದರು.

Advertisement

ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯಲ್ಲಿ ಪುತ್ತೂರು ವಿಭಾಗದ ಲೋಕೋಪಯೋಗಿ ಇಲಾಖೆಯ ವತಿಯಿಂದ ಈಗಾಗಲೇ ರಸ್ತೆ ಚರಂಡಿ ದುರಸ್ತಿ ಹಾಗೂ ರಸ್ತೆಯಲ್ಲಿ ನೀರು ಹೋಗುವುದರ ತಡೆಗೆ ಕೆಲಸಗಳನ್ನು ಮಾಡಲಾಗುತ್ತಿದೆ. ರಸ್ತೆಯ ಅಲ್ಲಲ್ಲಿ ಎಚ್ಚರಿಕಾ ಫಲಕ, ಹಂಪ್‌ ನಿರ್ಮಾಣ ಸೇರಿದಂತೆ ರಸ್ತೆಯ ಬದಿಗೆ ಎಚ್ಚರಿಕೆಯ ಗುರುತುಗಳನ್ನು ಅಳವಡಿಸಲಾಗಿದೆ. ಆದರೆ ಸುಳ್ಯ ವಿಭಾಗದಲ್ಲಿ ಅಂತಹ ಯಾವುದೇ ದುರಸ್ತಿ, ಎಚ್ಚರಿಕಾ ಫಲಕಗಳು ಕಾಣಿಸುತ್ತಿಲ್ಲ. ಮಳೆಗಾಲ ಜೋರಾಗಿ ಆರಂಭವಾಗುವ ಮೊದಲು ರಸ್ತೆ ಚರಂಡಿ ವ್ಯವಸ್ಥೆ ಸರಿ ಮಾಡಬೇಕು ಎಂದು ಸಾರ್ವಜನಿಕರು  ಇದೇ ವೇಳೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

4 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

5 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

5 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago