Advertisement
ಸುದ್ದಿಗಳು

ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ | ಕಲ್ಲೇರಿ ಸೇತುವೆ ಉದ್ಘಾಟನೆ | ರಸ್ತೆ ಚರಂಡಿಗೆ ಬೇಕಿದೆ ಕಾಯಕಲ್ಪ |

Share

ಸುಬ್ರಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯ ನಿಂತಿಕಲ್ ಸಮೀಪದ ಕಲ್ಲೇರಿ ಅಪಘಾತ ವಲಯದಲ್ಲಿ ರೂ. 1.25 ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾದ ಸೇತುವೆಯನ್ನು ಭಾನುವಾರ ಸಚಿವ ಎಸ್‌ ಅಂಗಾರ ಉದ್ಘಾಟಿಸಿದರು.  

ಅಪಘಾತ ವಲಯವಾಗಿ ಹಲವು ಸಮಯಗಳಿಂದ ಗಮನ ಸೆಳೆದಿದ್ದ ಈ ಪ್ರದೇಶದಲ್ಲಿ ನೂತನವಾಗಿ ಸೇತುವೆ ಹಾಗೂ ಸಂಪರ್ಕ ರಸ್ತೆ ನಿರ್ಮಾಣವಾಗಿ ಸಾರ್ವಜನಿಕ ಉಪಯೋಗಕ್ಕೆ ತೆರೆದುಕೊಂಡಿದೆ. ಕಾಮಗಾರಿ ಮುಗಿದರೂ ವಾಹನ ಸಂಚಾರಕ್ಕೆ ಮುಕ್ತವಾಗಿರಲಿಲ್ಲ. ಈಚೆಗೆ ರಸ್ತೆ ತಡೆಗೆ ಇರಿಸಿದ್ದ ಮರಳಿನ ಚೀಲದಿಂದಲೇ ಅಪಾಯ ಉಂಟಾದ ವೇಳೆ ಸ್ಥಳೀಯರು ಇಲಾಖೆಯನ್ನು ಎಚ್ಚರಿಸಿದ್ದರು. ಇದೀಗ ಸೇತುವೆ ಹಾಗೂ ರಸ್ತೆ ಉದ್ಘಾಟನೆಗೊಂಡಿದೆ. ಉದ್ಘಾಟನೆ ವೇಳೆ ಸ್ಥಳೀಯ ಮುಖಂಡರು, ಇಲಾಖಾ ಅಧಿಕಾರಿಗಳು ಇದ್ದರು.

ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯಲ್ಲಿ ಪುತ್ತೂರು ವಿಭಾಗದ ಲೋಕೋಪಯೋಗಿ ಇಲಾಖೆಯ ವತಿಯಿಂದ ಈಗಾಗಲೇ ರಸ್ತೆ ಚರಂಡಿ ದುರಸ್ತಿ ಹಾಗೂ ರಸ್ತೆಯಲ್ಲಿ ನೀರು ಹೋಗುವುದರ ತಡೆಗೆ ಕೆಲಸಗಳನ್ನು ಮಾಡಲಾಗುತ್ತಿದೆ. ರಸ್ತೆಯ ಅಲ್ಲಲ್ಲಿ ಎಚ್ಚರಿಕಾ ಫಲಕ, ಹಂಪ್‌ ನಿರ್ಮಾಣ ಸೇರಿದಂತೆ ರಸ್ತೆಯ ಬದಿಗೆ ಎಚ್ಚರಿಕೆಯ ಗುರುತುಗಳನ್ನು ಅಳವಡಿಸಲಾಗಿದೆ. ಆದರೆ ಸುಳ್ಯ ವಿಭಾಗದಲ್ಲಿ ಅಂತಹ ಯಾವುದೇ ದುರಸ್ತಿ, ಎಚ್ಚರಿಕಾ ಫಲಕಗಳು ಕಾಣಿಸುತ್ತಿಲ್ಲ. ಮಳೆಗಾಲ ಜೋರಾಗಿ ಆರಂಭವಾಗುವ ಮೊದಲು ರಸ್ತೆ ಚರಂಡಿ ವ್ಯವಸ್ಥೆ ಸರಿ ಮಾಡಬೇಕು ಎಂದು ಸಾರ್ವಜನಿಕರು  ಇದೇ ವೇಳೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

3 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

4 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

5 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

5 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

5 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

9 hours ago