ರೈತರಿಗೆ ಕೃಷಿ ಸಲಕರಣೆಗಳಿಗೆ ಸಹಾಯಧನ…..! | ಮನೆಯಲ್ಲೇ ಸ್ವಂತ ಉದ್ಯಮ ಮಾಡುವವರಿಗೆ ಲಾಭ..! |

March 6, 2023
2:58 PM

ಸರ್ಕಾರದಿಂದ ರೈತರಿಗಾಗಿ ವಿವಿಧ ಹಾಗೂ ಹಲವಾರು ರೀತಿಯ ಧನ ಸಹಾಯ ಯೋಜನೆಗಳು ಜಾರಿಗೆ ಬರುತ್ತಲೇ ಇರುತ್ತವೆ. ಆದರೆ ಅದು ರೈತರ ಪಾಲಿಗೆ ಎಷ್ಟರಮಟ್ಟಿಗೆ ತಲುಪುತ್ತೆ ಅನ್ನೋದು ಗೊತ್ತಿಲ್ಲ.  ರೈತರ ಹಿತದೃಷ್ಠಿಯಿಂದ ಸರ್ಕಾರವು ಹಲವು ಯೋಜನೆಗಳಿಗೆ ಸಬ್ಸಿಡಿ, ಸಹಾಯಧನವನ್ನು ನೀಡುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಕೂಡಾ ಸರ್ಕಾರದಿಂದ ನೀಡಲಾಗುತ್ತದೆ.

Advertisement
Advertisement
Advertisement

ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಕೃಷಿ ಇಲಾಖೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡುತ್ತಿದೆ.

Advertisement

ಕೃಷಿ ಸಲಕರಣೆ

  • ಹಿಟ್ಟಿನ ಗಿರಣಿ
  • ಕಾರ ಕುಟ್ಟುವ ಯಂತ್ರ
  • ಎಣ್ಣೆ ಗಾಣ ಯಂತ್ರ
  • ಶಾವಿಗೆ ಯಂತ್ರ
  • ಕಬ್ಬಿನ ಹಾಲು ಯಂತ್ರ, ಇತ್ಯಾದಿ

 ನೀವು ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು :

  • ಪಹಣಿ
  • ಆಧಾರ್ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಭಾವಚಿತ್ರ
  • ಜಾತಿ ಪ್ರಮಾಣ ಪತ್ರ

ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನಾಂಕವಾಗಿರುತ್ತದೆ.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror