ಸರ್ಕಾರದಿಂದ ರೈತರಿಗಾಗಿ ವಿವಿಧ ಹಾಗೂ ಹಲವಾರು ರೀತಿಯ ಧನ ಸಹಾಯ ಯೋಜನೆಗಳು ಜಾರಿಗೆ ಬರುತ್ತಲೇ ಇರುತ್ತವೆ. ಆದರೆ ಅದು ರೈತರ ಪಾಲಿಗೆ ಎಷ್ಟರಮಟ್ಟಿಗೆ ತಲುಪುತ್ತೆ ಅನ್ನೋದು ಗೊತ್ತಿಲ್ಲ. ರೈತರ ಹಿತದೃಷ್ಠಿಯಿಂದ ಸರ್ಕಾರವು ಹಲವು ಯೋಜನೆಗಳಿಗೆ ಸಬ್ಸಿಡಿ, ಸಹಾಯಧನವನ್ನು ನೀಡುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಕೂಡಾ ಸರ್ಕಾರದಿಂದ ನೀಡಲಾಗುತ್ತದೆ.
ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಕೃಷಿ ಇಲಾಖೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡುತ್ತಿದೆ.
ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿರುತ್ತದೆ.
18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490