ಸರ್ಕಾರದಿಂದ ರೈತರಿಗಾಗಿ ವಿವಿಧ ಹಾಗೂ ಹಲವಾರು ರೀತಿಯ ಧನ ಸಹಾಯ ಯೋಜನೆಗಳು ಜಾರಿಗೆ ಬರುತ್ತಲೇ ಇರುತ್ತವೆ. ಆದರೆ ಅದು ರೈತರ ಪಾಲಿಗೆ ಎಷ್ಟರಮಟ್ಟಿಗೆ ತಲುಪುತ್ತೆ ಅನ್ನೋದು ಗೊತ್ತಿಲ್ಲ. ರೈತರ ಹಿತದೃಷ್ಠಿಯಿಂದ ಸರ್ಕಾರವು ಹಲವು ಯೋಜನೆಗಳಿಗೆ ಸಬ್ಸಿಡಿ, ಸಹಾಯಧನವನ್ನು ನೀಡುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಕೂಡಾ ಸರ್ಕಾರದಿಂದ ನೀಡಲಾಗುತ್ತದೆ.
ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಕೃಷಿ ಇಲಾಖೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡುತ್ತಿದೆ.
ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿರುತ್ತದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…