Advertisement
ಸುದ್ದಿಗಳು

ರೈತರಿಗೆ ಕೃಷಿ ಸಲಕರಣೆಗಳಿಗೆ ಸಹಾಯಧನ…..! | ಮನೆಯಲ್ಲೇ ಸ್ವಂತ ಉದ್ಯಮ ಮಾಡುವವರಿಗೆ ಲಾಭ..! |

Share

ಸರ್ಕಾರದಿಂದ ರೈತರಿಗಾಗಿ ವಿವಿಧ ಹಾಗೂ ಹಲವಾರು ರೀತಿಯ ಧನ ಸಹಾಯ ಯೋಜನೆಗಳು ಜಾರಿಗೆ ಬರುತ್ತಲೇ ಇರುತ್ತವೆ. ಆದರೆ ಅದು ರೈತರ ಪಾಲಿಗೆ ಎಷ್ಟರಮಟ್ಟಿಗೆ ತಲುಪುತ್ತೆ ಅನ್ನೋದು ಗೊತ್ತಿಲ್ಲ.  ರೈತರ ಹಿತದೃಷ್ಠಿಯಿಂದ ಸರ್ಕಾರವು ಹಲವು ಯೋಜನೆಗಳಿಗೆ ಸಬ್ಸಿಡಿ, ಸಹಾಯಧನವನ್ನು ನೀಡುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಕೂಡಾ ಸರ್ಕಾರದಿಂದ ನೀಡಲಾಗುತ್ತದೆ.

ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಕೃಷಿ ಇಲಾಖೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡುತ್ತಿದೆ.

ಕೃಷಿ ಸಲಕರಣೆ

  • ಹಿಟ್ಟಿನ ಗಿರಣಿ
  • ಕಾರ ಕುಟ್ಟುವ ಯಂತ್ರ
  • ಎಣ್ಣೆ ಗಾಣ ಯಂತ್ರ
  • ಶಾವಿಗೆ ಯಂತ್ರ
  • ಕಬ್ಬಿನ ಹಾಲು ಯಂತ್ರ, ಇತ್ಯಾದಿ

ನೀವು ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು :

  • ಪಹಣಿ
  • ಆಧಾರ್ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಭಾವಚಿತ್ರ
  • ಜಾತಿ ಪ್ರಮಾಣ ಪತ್ರ

ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನಾಂಕವಾಗಿರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

7 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

15 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

17 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

22 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

24 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago