Advertisement
ಸುದ್ದಿಗಳು

ರೈತರಿಗೆ ಕೃಷಿ ಸಲಕರಣೆಗಳಿಗೆ ಸಹಾಯಧನ…..! | ಮನೆಯಲ್ಲೇ ಸ್ವಂತ ಉದ್ಯಮ ಮಾಡುವವರಿಗೆ ಲಾಭ..! |

Share

ಸರ್ಕಾರದಿಂದ ರೈತರಿಗಾಗಿ ವಿವಿಧ ಹಾಗೂ ಹಲವಾರು ರೀತಿಯ ಧನ ಸಹಾಯ ಯೋಜನೆಗಳು ಜಾರಿಗೆ ಬರುತ್ತಲೇ ಇರುತ್ತವೆ. ಆದರೆ ಅದು ರೈತರ ಪಾಲಿಗೆ ಎಷ್ಟರಮಟ್ಟಿಗೆ ತಲುಪುತ್ತೆ ಅನ್ನೋದು ಗೊತ್ತಿಲ್ಲ.  ರೈತರ ಹಿತದೃಷ್ಠಿಯಿಂದ ಸರ್ಕಾರವು ಹಲವು ಯೋಜನೆಗಳಿಗೆ ಸಬ್ಸಿಡಿ, ಸಹಾಯಧನವನ್ನು ನೀಡುತ್ತದೆ. ರೈತರಿಗೆ ಕೃಷಿ ಸಲಕರಣೆ ಪಡೆಯಲು ಸಬ್ಸಿಡಿಯನ್ನು ಕೂಡಾ ಸರ್ಕಾರದಿಂದ ನೀಡಲಾಗುತ್ತದೆ.

ಕರ್ನಾಟಕದ ಕೃಷಿ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಕೃಷಿ ಮಾಡುವ ರೈತರಿಗೆ ಕೃಷಿ ಉತ್ಪನ್ನ ಸಂಸ್ಕರಣೆ ಯಂತ್ರಗಳನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳಪಡುವವರಿಗೆ ಶೇಕಡಾ 90% ಸಬ್ಸಿಡಿ ಸಹಾಯಧನವನ್ನು ನೀಡಲಾಗುತ್ತದೆ. ಹಾಗೂ ಇತರೆ ಅಭ್ಯರ್ಥಿಗಳಿಗೆ ಶೇಕಡಾ 50% ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಈ ಯಂತ್ರಗಳನ್ನು ಪಡೆಯಲು ಎಲ್ಲಾ ರೈತರಿಗೆ ಕೃಷಿ ಇಲಾಖೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಕೃಷಿ ಇಲಾಖೆ ಸಂಸ್ಕರಣಾ ಯಂತ್ರ ಸಲಕರಣೆಗಾಗಿ 2022-23 ನೇ ಸಾಲಿನ ಕೃಷಿ ಸಂಸ್ಕರಣಾ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಸಂಸ್ಕರಣಾ ಸಲಕರಣೆಯನ್ನು ನೀಡುತ್ತಿದೆ.

ಕೃಷಿ ಸಲಕರಣೆ

  • ಹಿಟ್ಟಿನ ಗಿರಣಿ
  • ಕಾರ ಕುಟ್ಟುವ ಯಂತ್ರ
  • ಎಣ್ಣೆ ಗಾಣ ಯಂತ್ರ
  • ಶಾವಿಗೆ ಯಂತ್ರ
  • ಕಬ್ಬಿನ ಹಾಲು ಯಂತ್ರ, ಇತ್ಯಾದಿ

ನೀವು ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು :

  • ಪಹಣಿ
  • ಆಧಾರ್ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಭಾವಚಿತ್ರ
  • ಜಾತಿ ಪ್ರಮಾಣ ಪತ್ರ

ಹೆಚ್ಚಿನ ಮಾಹಿತಿಗೆ ಸ್ಥಳೀಯ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು ಮತ್ತು ಅಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಯಂತ್ರಗಳನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನಾಂಕವಾಗಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

2 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago