ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

January 8, 2026
9:25 PM

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು ಆದಾಯ ಗಳಿಸುತ್ತಿದ್ದಾರೆ. ಗ್ರಾಮೀಣ ಭಾಗದತ್ತ ನೋಡುವುದಾರೆ ಕುರಿಸಾಕಾಣಿಕೆಯನ್ನು ಸ್ವಯಂ ಉದ್ಯೋಗವನ್ನಾಗಿಸಲು ಸಾಧ್ಯವಿಲ್ಲ. ಇದಕ್ಕಾಗಿ ಗ್ರಾಮೀಣ ಭಾಗದವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಜಾರಿಗೆ ತಂದಿದೆ.

ಯೋಜನೆಯ ಒಟ್ಟು ವೆಚ್ಚ ಮತ್ತು ಸಹಾಯಧನ:  ಒಂದು ಕುರಿ ಸಾಕಾಣಿಕೆ ಘಟಕದ ಒಟ್ಟು ವೆಚ್ಚವನ್ನು ಸರ್ಕಾರ ರೂ, 1,75,000 ಎಂದು ನಿಗದಿಪಡಿಸಿದೆ. ಈ ಮೊತ್ತವನ್ನು ಕೆಳಕಂಡಂತೆ ಹಂಚಿಕೆ ಮಾಡಲಾಗುತ್ತದೆ:

• ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಮೂಲಕ ಶೇ.50% ಸಾಲ (ರೂ 87,500)
• ಶೇ. 25% ಸರ್ಕಾರದ ಸಹಾಯಧನ ( ರೂ 43,750) ಮರುಪಾವತಿ ಅಗತ್ಯವಿಲ್ಲ
• ಶೇ. 25% ಫಲಾನುಭವಿಯ ವಂತಿಕೆ ರೂ43,750 ಅರ್ಜಿದಾರರು ಭರಿಸಬೇಕಾದ ಮೊತ್ತ
• 20 ಹೆಣ್ಣು ಕುರಿ ಅಥವಾ ಮೇಕೆಗಳು
• 1 ಗಂಡು ಟಗರರು ಅಥವಾ ಹೋತ

ಅಗತ್ಯ ದಾಖಲೆಗಳು : 
* ಆಧಾರ್ ಕಾರ್ಡ್
• ಪಡಿತರ ಚೀಟಿ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಭಾವಚಿತ್ರ
• ಜಾತಿ ಪ್ರಮಾಣ ಪತ್ರ
• ಸಹಕಾರಿ ಸಂಘದ ಸದಸ್ಯತ್ವದ ಪುರಾವೆ
ಅರ್ಜಿ ಸಲ್ಲಿಸುವ ವಿಧಾನ : ನಿಮ್ಮ ತಾಲೂಕಿನ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಚೇರಿಗೆ ಭೇಟಿ ನೀಡಿ, ಅಧಿಕೃತ ಅರ್ಜಿ ಸಲ್ಲಿಸಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror