Advertisement
ಮಾಹಿತಿ

ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಗೆ ಸಹಾಯಧನ | ಸಹಾಯಧನಕ್ಕಾಗಿ ಈಗಲೇ ಅರ್ಜಿ ಸಲ್ಲಿಸಿ

Share

ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಬೆಳೆಗಳಾದ(commercial crop) ಸಂಬಾರ ಬೆಳೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಕಾಳು ಮೆಣಸು ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಅದೇ ರೀತಿಯಲ್ಲಿ ಏಲಕ್ಕಿ, ಚಕ್ಕೆ ಲವಂಗ, ಜಾಯಿಕಾಯಿ ಸೇರದಂತೆ ಎಲ್ಲಾ ಸಾಂಬಾರ ಪದಾರ್ಥಗಳ(Spice crop) ಬೆಲೆ(Price) ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ರೈತರು(Farmers) ಪರ್ಯಾಯ ಬೆಲೆಯಾಗಿ ಸಂಬಾರ ಬೆಳೆಗಳನ್ನು ಬೆಳೆಯುವ ನಿಟ್ಟಿನಲ್ಲಿ ಸಂಬಾರು ಬೆಳೆಗಾರರಿಗೆ ಸಹಾಯಧನಕ್ಕಾಗಿ(Subsidy) ಅರ್ಜಿ ಆಹ್ವಾನಿಸಲಾಗಿದೆ. 2024 – 25 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ವತಿಯಿಂದ(Karnataka State Commodity Development Board) ಸಂಬಾರು ಬೆಳೆಗಾರರಿಂದ(Cultivators) ಈ ಅರ್ಜಿಯನ್ನು ಆಹ್ವಾನಿಸಲಾಗಿದೆ.

Advertisement
Advertisement

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ನಿಗಮ ಮತ್ತು ಮಂಡಳಿಗಳಿಗೆ ಸಹಾಯಧನ ಉಪಯೋಜನೆಯಡಿ ಯಾಂತ್ರೀಕರಣ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಅನುಮೋದಿತ ಸರಬರಾಜುದಾರರು, ಕಂಪನಿಗಳಿಂದ ರೈತರು ಖರೀದಿಸುವ ಅನುಮೋದಿತ ಯಂತ್ರೋಪಕರಣಗಳಿಗೆ ಹಾಗೂ ಸಂಬಾರು ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕ, ಸೌರ ಶಾಖ ಘಟಕಗಳಿಗೆ ಇಲಾಖಾ ಮಾರ್ಗಸೂಚಿಗಳನ್ವಯ ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Advertisement

ಅರ್ಜಿ ಸಲ್ಲಿಸುವುದು ಹೇಗೆ? : ರೈತರು ಮಂಡಳಿಯ ಜಾಲತಾಣದ ಮೂಲಕ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. ಆಸಕ್ತಿಯುಳ್ಳ ಸಂಬಾರು ಬೆಳೆಗಾರರು ಸಹಾಯಧನಕ್ಕಾಗಿ ಮಂಡಳಿಗೆ ಜುಲೈ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮೊದಲು ಬಂದವರಿಗೆ ನಿಯಮಾನುಸಾರ ಮೊದಲ ಆದ್ಯತೆ ನೀಡುವ ಮೂಲಕ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿಗಳ ಮಿತಿಯಲ್ಲಿ ಸಹಾಯಧನ ನೀಡಲಾಗುವುದು. http://kssdb.karnataka.gov.in

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ನೇಕಾರ ಭವನ, ವಿದ್ಯಾನಗರ, ಹುಬ್ಬಳ್ಳಿ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 0836-2375030 ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಪ್ರಧಾನ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಏರುತ್ತಿರುವ ಡೆಂಗ್ಯು ಪ್ರಕರಣ | ಬರೋಬ್ಬರಿ 7 ಸಾವಿರ ಗಡಿದಾಟಿದ ಕೇಸ್‌ | ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ರಾಜ್ಯದ(Karnataka) ಜಿಲ್ಲೆಗಳಲ್ಲಿ ಮುಂಗಾರು ಮಳೆ(Rain) ಜೋರಾಗುತ್ತಿದ್ದಂತೆ ಡೆಂಗ್ಯು ಸೋಂಕಿತರ (Dengue fever) ಸಂಖ್ಯೆಯೂ…

5 hours ago

ನಿಮ್ಮ ಕನಸಿನ ಕೃಷಿ ಭೂಮಿಯ ವಿನ್ಯಾಸ ಮಾಡುವ ಇಚ್ಚೆ ಇದೆಯೇ..? | ಫಾರ್ಮ್ ವಿನ್ಯಾಸದ ಉದ್ದೇಶವೇನು?

ಕೃಷಿ ಜಮೀನು(Farm Land) ಹೊಸದಾಗಿ ಖರೀದಿಸಿರುವ ಮತ್ತು ಕೃಷಿ ಭೂಮಿ ಹೊಂದಿರುವ ಕೃಷಿಕರಿಗೆ(Agriculturist)…

7 hours ago

ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮಳೆ, ಪ್ರವಾಹ, ಭೂಕುಸಿತ | ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ | ರಾಜ್ಯದ ಡ್ಯಾಂಗಳ ನೀರಿನ ಲೆಕ್ಕ ಏನು?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು(Mansoon) ಚುರುಗೊಂಡಿದ್ದು, ವರುಣ(Rain) ಅಬ್ಬರಿಸುತ್ತಿದ್ದಾನೆ. ಹಲವು ಕಡೆ ಸಾಕಷ್ಟು…

7 hours ago

ಹವಾಮಾನ ವರದಿ | 8-7-2024 | ರಾಜ್ಯದ ಬಹುತೇಕ ಕಡೆ ಮಳೆ | ಜು.9 ರಿಂದ ಎರಡು ದಿನಗಳ ಕಾಲ ಮಳೆ ಕಡಿಮೆ ನಿರೀಕ್ಷೆ |

ಈಗಿನಂತೆ ಜುಲೈ 9ರಿಂದ ಎರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

8 hours ago

ವರ್ಷಪೂರ್ತಿ ಜನರಿಗೆ ಮಾವು, ಹಲಸು..! | ಆಹಾರ ಭದ್ರತೆಯ ಕಡೆಗೆ ಹೆಜ್ಜೆ | ಹೊಸ ರೀತಿಯ ಹಣ್ಣುಗಳ ಪರಿಚಯಕ್ಕೆ ಇಳಿದ ಬಾಂಗ್ಲಾದೇಶ |

ಹಣ್ಣು ಕೃಷಿಯ ಕಡಗೆ ಪ್ರಪಂಚದ ಹಲವು ಕಡೆ ಆದ್ಯತೆ ನೀಡಲಾಗುತ್ತಿದೆ. ಭಾರತವೂ ಈ…

22 hours ago