Advertisement
ಮಾಹಿತಿ

ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಗೆ ಸಹಾಯಧನ | ಸಹಾಯಧನಕ್ಕಾಗಿ ಈಗಲೇ ಅರ್ಜಿ ಸಲ್ಲಿಸಿ

Share

ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಬೆಳೆಗಳಾದ(commercial crop) ಸಂಬಾರ ಬೆಳೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಕಾಳು ಮೆಣಸು ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಅದೇ ರೀತಿಯಲ್ಲಿ ಏಲಕ್ಕಿ, ಚಕ್ಕೆ ಲವಂಗ, ಜಾಯಿಕಾಯಿ ಸೇರದಂತೆ ಎಲ್ಲಾ ಸಾಂಬಾರ ಪದಾರ್ಥಗಳ(Spice crop) ಬೆಲೆ(Price) ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ರೈತರು(Farmers) ಪರ್ಯಾಯ ಬೆಲೆಯಾಗಿ ಸಂಬಾರ ಬೆಳೆಗಳನ್ನು ಬೆಳೆಯುವ ನಿಟ್ಟಿನಲ್ಲಿ ಸಂಬಾರು ಬೆಳೆಗಾರರಿಗೆ ಸಹಾಯಧನಕ್ಕಾಗಿ(Subsidy) ಅರ್ಜಿ ಆಹ್ವಾನಿಸಲಾಗಿದೆ. 2024 – 25 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ವತಿಯಿಂದ(Karnataka State Commodity Development Board) ಸಂಬಾರು ಬೆಳೆಗಾರರಿಂದ(Cultivators) ಈ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ನಿಗಮ ಮತ್ತು ಮಂಡಳಿಗಳಿಗೆ ಸಹಾಯಧನ ಉಪಯೋಜನೆಯಡಿ ಯಾಂತ್ರೀಕರಣ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಅನುಮೋದಿತ ಸರಬರಾಜುದಾರರು, ಕಂಪನಿಗಳಿಂದ ರೈತರು ಖರೀದಿಸುವ ಅನುಮೋದಿತ ಯಂತ್ರೋಪಕರಣಗಳಿಗೆ ಹಾಗೂ ಸಂಬಾರು ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕ, ಸೌರ ಶಾಖ ಘಟಕಗಳಿಗೆ ಇಲಾಖಾ ಮಾರ್ಗಸೂಚಿಗಳನ್ವಯ ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ? : ರೈತರು ಮಂಡಳಿಯ ಜಾಲತಾಣದ ಮೂಲಕ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. ಆಸಕ್ತಿಯುಳ್ಳ ಸಂಬಾರು ಬೆಳೆಗಾರರು ಸಹಾಯಧನಕ್ಕಾಗಿ ಮಂಡಳಿಗೆ ಜುಲೈ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮೊದಲು ಬಂದವರಿಗೆ ನಿಯಮಾನುಸಾರ ಮೊದಲ ಆದ್ಯತೆ ನೀಡುವ ಮೂಲಕ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿಗಳ ಮಿತಿಯಲ್ಲಿ ಸಹಾಯಧನ ನೀಡಲಾಗುವುದು. http://kssdb.karnataka.gov.in

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ನೇಕಾರ ಭವನ, ವಿದ್ಯಾನಗರ, ಹುಬ್ಬಳ್ಳಿ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 0836-2375030 ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಪ್ರಧಾನ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

3 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

9 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

9 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago