Advertisement
ಮಾಹಿತಿ

ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಗೆ ಸಹಾಯಧನ | ಸಹಾಯಧನಕ್ಕಾಗಿ ಈಗಲೇ ಅರ್ಜಿ ಸಲ್ಲಿಸಿ

Share

ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಬೆಳೆಗಳಾದ(commercial crop) ಸಂಬಾರ ಬೆಳೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಕಾಳು ಮೆಣಸು ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಅದೇ ರೀತಿಯಲ್ಲಿ ಏಲಕ್ಕಿ, ಚಕ್ಕೆ ಲವಂಗ, ಜಾಯಿಕಾಯಿ ಸೇರದಂತೆ ಎಲ್ಲಾ ಸಾಂಬಾರ ಪದಾರ್ಥಗಳ(Spice crop) ಬೆಲೆ(Price) ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ರೈತರು(Farmers) ಪರ್ಯಾಯ ಬೆಲೆಯಾಗಿ ಸಂಬಾರ ಬೆಳೆಗಳನ್ನು ಬೆಳೆಯುವ ನಿಟ್ಟಿನಲ್ಲಿ ಸಂಬಾರು ಬೆಳೆಗಾರರಿಗೆ ಸಹಾಯಧನಕ್ಕಾಗಿ(Subsidy) ಅರ್ಜಿ ಆಹ್ವಾನಿಸಲಾಗಿದೆ. 2024 – 25 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ವತಿಯಿಂದ(Karnataka State Commodity Development Board) ಸಂಬಾರು ಬೆಳೆಗಾರರಿಂದ(Cultivators) ಈ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ನಿಗಮ ಮತ್ತು ಮಂಡಳಿಗಳಿಗೆ ಸಹಾಯಧನ ಉಪಯೋಜನೆಯಡಿ ಯಾಂತ್ರೀಕರಣ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಅನುಮೋದಿತ ಸರಬರಾಜುದಾರರು, ಕಂಪನಿಗಳಿಂದ ರೈತರು ಖರೀದಿಸುವ ಅನುಮೋದಿತ ಯಂತ್ರೋಪಕರಣಗಳಿಗೆ ಹಾಗೂ ಸಂಬಾರು ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕ, ಸೌರ ಶಾಖ ಘಟಕಗಳಿಗೆ ಇಲಾಖಾ ಮಾರ್ಗಸೂಚಿಗಳನ್ವಯ ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ? : ರೈತರು ಮಂಡಳಿಯ ಜಾಲತಾಣದ ಮೂಲಕ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. ಆಸಕ್ತಿಯುಳ್ಳ ಸಂಬಾರು ಬೆಳೆಗಾರರು ಸಹಾಯಧನಕ್ಕಾಗಿ ಮಂಡಳಿಗೆ ಜುಲೈ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮೊದಲು ಬಂದವರಿಗೆ ನಿಯಮಾನುಸಾರ ಮೊದಲ ಆದ್ಯತೆ ನೀಡುವ ಮೂಲಕ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿಗಳ ಮಿತಿಯಲ್ಲಿ ಸಹಾಯಧನ ನೀಡಲಾಗುವುದು. http://kssdb.karnataka.gov.in

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ : ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ನೇಕಾರ ಭವನ, ವಿದ್ಯಾನಗರ, ಹುಬ್ಬಳ್ಳಿ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 0836-2375030 ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಪ್ರಧಾನ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

2 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

22 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago