Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಉದ್ಯಮ ಸ್ಥಾಪಿಸಲು 15 ಲಕ್ಷ ರೂ.ಸಹಾಯಧನ

Share

ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯಮಗಳನ್ನು ಆರಂಭಿಸುವವರಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವ ಯೋಜನೆಯ ಅಡಿಯಲ್ಲಿ ರೂ 15 ಲಕ್ಷ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯು ರಾಗಿ ಹಿಟ್ಟು, ಗಾಣದ ಎಣ್ಣೆ, ಬೆಲ್ಲದ ಪಾಕ, ಮೆಣಸಿನ ಪುಡಿ, ಹಣ್ಣಿನ ಜಾಮ್, ಸಿರಿಧಾನ್ಯದ ಉತ್ಪನ್ನಗಳು ಇಂತಹ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವವರಿಗೆ ನೀಡಲಾಗುವುದು. ಇಂತಹ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಗರಿಷ್ಠ ₹15 ಲಕ್ಷ ಸಹಾಯಧನ ಲಭ್ಯವಿದೆ. ಈ ಯೋಜನೆಯು 2020ರಲ್ಲಿ ಆರಂಭವಾಗಿ 2026 ರವರೆಗೆ ವಿಸ್ತರಣೆಯಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಸಾವಿರಾರು ಘಟಕಗಳು ಯಶಸ್ವಿಯಾಗಿ ನಡೆಯುತ್ತಿವೆ.

ಒಟ್ಟು ಸಹಾಯಧನ: ಯೋಜನಾ ವೆಚ್ಚದ 35% ಅಥವಾ ಗರಿಷ್ಠ ₹15 ಲಕ್ಷ ಆಗಿರುತ್ತದೆ. ಇದರಲ್ಲಿ ಕೇಂದ್ರ ಪಾಲು ₹10 ಲಕ್ಷದವರೆಗೆ 35% . ಉಳಿದಂತೆ ರಾಜ್ಯ ಪಾಲು ಹೆಚ್ಚುವರಿಯಾಗಿ ₹9 ಲಕ್ಷದವರೆಗೆ ಅಂದರೆ ಕರ್ನಾಟಕದ ವಿಶೇಷ ನೆರವು.
ಈ ಯೋಜನೆಗೆ  18 ವರ್ಷ ತುಂಬಿದ ಯಾವುದೇ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ರೈತರು, ಮಹಿಳೆಯರು, ಯುವಕರು, ಸ್ವ-ಸಹಾಯ ಗುಂಪುಗಳು , ರೈತ ಉತ್ಪಾದಕ ಸಂಘಗಳು, ಸಹಕಾರಿ ಸಂಘಗಳು, ಖಾಸಗಿ ಸಂಸ್ಥೆಗಳು ,  ಈಗಾಗಲೇ ಬ್ಯಾಂಕ್ ಸಾಲ ಪಡೆದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ

ಸಿರಿಧಾನ್ಯ ಸಂಸ್ಕರಣಾ ಘಟಕಗಳು (ರಾಗಿ, ಜೋಳ, ನವಣೆ, ಸಾಮೆ), ಗಾಣದ ಎಣ್ಣೆ (ಕೋಲ್ಡ್ ಪ್ರೆಸ್ಡ್ ಆಯಿಲ್) ಘಟಕಗಳು, ಬೆಲ್ಲ ಮತ್ತು ಸಕ್ಕರೆ ಆಧಾರಿತ ಉತ್ಪನ್ನ ಘಟಕಗಳು, ಮಸಾಲಾ ಪುಡಿ ಘಟಕಗಳು, ಹಣ್ಣು-ತರಕಾರಿ ಸಂಸ್ಕರಣಾ ಘಟಕಗಳು , ಬೇಕರಿ ಮತ್ತು ಸ್ನ್ಯಾಕ್ಸ್ ಘಟಕಗಳು, ಮೀನು, ಕೋಳಿ ಸಂಸ್ಕರಣಾ ಘಟಕಗಳು, ಸಾವಯವ ಉತ್ಪನ್ನ ಘಟಕಗಳಿಗೆ  ಸಹಾಯಧನ ಸಿಗುತ್ತದೆ.

ಕರ್ನಾಟಕದಲ್ಲಿ ಸುಮಾರು 22,000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದೆ. 7,000ಕ್ಕೂ ಹೆಚ್ಚು ಘಟಕಗಳಿಗೆ ಸಹಾಯಧನ ಮಂಜೂರಾತಿಯಾಗಿದೆ. ಇದರಲ್ಲಿ 1,800ಕ್ಕೂ ಹೆಚ್ಚು ಸಿರಿಧಾನ್ಯ ಘಟಕಗಳು, 800ಕ್ಕೂ ಹೆಚ್ಚು ಗಾಣದ ಎಣ್ಣೆ ಘಟಕಗಳು, 400ಕ್ಕೂ ಹೆಚ್ಚು ಬೆಲ್ಲ ಘಟಕಗಳು ಸೇರಿವೆ.

ಹೆಚ್ಚಿನ ಮಾಹಿತಿಗೆ  –  https://pmfme.mofpi.gov.in  ಅಥವಾ  ಕರ್ನಾಟಕ ಮಾಹಿತಿ: https://kappec.karnataka.gov.in

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

10 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

11 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

20 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

20 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

21 hours ago