Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಉದ್ಯಮ ಸ್ಥಾಪಿಸಲು 15 ಲಕ್ಷ ರೂ.ಸಹಾಯಧನ

Share

ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯಮಗಳನ್ನು ಆರಂಭಿಸುವವರಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವ ಯೋಜನೆಯ ಅಡಿಯಲ್ಲಿ ರೂ 15 ಲಕ್ಷ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯು ರಾಗಿ ಹಿಟ್ಟು, ಗಾಣದ ಎಣ್ಣೆ, ಬೆಲ್ಲದ ಪಾಕ, ಮೆಣಸಿನ ಪುಡಿ, ಹಣ್ಣಿನ ಜಾಮ್, ಸಿರಿಧಾನ್ಯದ ಉತ್ಪನ್ನಗಳು ಇಂತಹ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವವರಿಗೆ ನೀಡಲಾಗುವುದು. ಇಂತಹ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಗರಿಷ್ಠ ₹15 ಲಕ್ಷ ಸಹಾಯಧನ ಲಭ್ಯವಿದೆ. ಈ ಯೋಜನೆಯು 2020ರಲ್ಲಿ ಆರಂಭವಾಗಿ 2026 ರವರೆಗೆ ವಿಸ್ತರಣೆಯಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಸಾವಿರಾರು ಘಟಕಗಳು ಯಶಸ್ವಿಯಾಗಿ ನಡೆಯುತ್ತಿವೆ.

ಒಟ್ಟು ಸಹಾಯಧನ: ಯೋಜನಾ ವೆಚ್ಚದ 35% ಅಥವಾ ಗರಿಷ್ಠ ₹15 ಲಕ್ಷ ಆಗಿರುತ್ತದೆ. ಇದರಲ್ಲಿ ಕೇಂದ್ರ ಪಾಲು ₹10 ಲಕ್ಷದವರೆಗೆ 35% . ಉಳಿದಂತೆ ರಾಜ್ಯ ಪಾಲು ಹೆಚ್ಚುವರಿಯಾಗಿ ₹9 ಲಕ್ಷದವರೆಗೆ ಅಂದರೆ ಕರ್ನಾಟಕದ ವಿಶೇಷ ನೆರವು.
ಈ ಯೋಜನೆಗೆ  18 ವರ್ಷ ತುಂಬಿದ ಯಾವುದೇ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ರೈತರು, ಮಹಿಳೆಯರು, ಯುವಕರು, ಸ್ವ-ಸಹಾಯ ಗುಂಪುಗಳು , ರೈತ ಉತ್ಪಾದಕ ಸಂಘಗಳು, ಸಹಕಾರಿ ಸಂಘಗಳು, ಖಾಸಗಿ ಸಂಸ್ಥೆಗಳು ,  ಈಗಾಗಲೇ ಬ್ಯಾಂಕ್ ಸಾಲ ಪಡೆದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ

ಸಿರಿಧಾನ್ಯ ಸಂಸ್ಕರಣಾ ಘಟಕಗಳು (ರಾಗಿ, ಜೋಳ, ನವಣೆ, ಸಾಮೆ), ಗಾಣದ ಎಣ್ಣೆ (ಕೋಲ್ಡ್ ಪ್ರೆಸ್ಡ್ ಆಯಿಲ್) ಘಟಕಗಳು, ಬೆಲ್ಲ ಮತ್ತು ಸಕ್ಕರೆ ಆಧಾರಿತ ಉತ್ಪನ್ನ ಘಟಕಗಳು, ಮಸಾಲಾ ಪುಡಿ ಘಟಕಗಳು, ಹಣ್ಣು-ತರಕಾರಿ ಸಂಸ್ಕರಣಾ ಘಟಕಗಳು , ಬೇಕರಿ ಮತ್ತು ಸ್ನ್ಯಾಕ್ಸ್ ಘಟಕಗಳು, ಮೀನು, ಕೋಳಿ ಸಂಸ್ಕರಣಾ ಘಟಕಗಳು, ಸಾವಯವ ಉತ್ಪನ್ನ ಘಟಕಗಳಿಗೆ  ಸಹಾಯಧನ ಸಿಗುತ್ತದೆ.

ಕರ್ನಾಟಕದಲ್ಲಿ ಸುಮಾರು 22,000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದೆ. 7,000ಕ್ಕೂ ಹೆಚ್ಚು ಘಟಕಗಳಿಗೆ ಸಹಾಯಧನ ಮಂಜೂರಾತಿಯಾಗಿದೆ. ಇದರಲ್ಲಿ 1,800ಕ್ಕೂ ಹೆಚ್ಚು ಸಿರಿಧಾನ್ಯ ಘಟಕಗಳು, 800ಕ್ಕೂ ಹೆಚ್ಚು ಗಾಣದ ಎಣ್ಣೆ ಘಟಕಗಳು, 400ಕ್ಕೂ ಹೆಚ್ಚು ಬೆಲ್ಲ ಘಟಕಗಳು ಸೇರಿವೆ.

ಹೆಚ್ಚಿನ ಮಾಹಿತಿಗೆ  –  https://pmfme.mofpi.gov.in  ಅಥವಾ  ಕರ್ನಾಟಕ ಮಾಹಿತಿ: https://kappec.karnataka.gov.in

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

6 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

14 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago