Advertisement
ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಉದ್ಯಮ ಸ್ಥಾಪಿಸಲು 15 ಲಕ್ಷ ರೂ.ಸಹಾಯಧನ

Share

ಗ್ರಾಮೀಣ ಭಾಗದಲ್ಲಿ ಸ್ವಂತ ಉದ್ಯಮಗಳನ್ನು ಆರಂಭಿಸುವವರಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವ ಯೋಜನೆಯ ಅಡಿಯಲ್ಲಿ ರೂ 15 ಲಕ್ಷ ಸಹಾಯಧನ ನೀಡಲು ಮುಂದಾಗಿದೆ. ಈ ಯೋಜನೆಯು ರಾಗಿ ಹಿಟ್ಟು, ಗಾಣದ ಎಣ್ಣೆ, ಬೆಲ್ಲದ ಪಾಕ, ಮೆಣಸಿನ ಪುಡಿ, ಹಣ್ಣಿನ ಜಾಮ್, ಸಿರಿಧಾನ್ಯದ ಉತ್ಪನ್ನಗಳು ಇಂತಹ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವವರಿಗೆ ನೀಡಲಾಗುವುದು. ಇಂತಹ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಗರಿಷ್ಠ ₹15 ಲಕ್ಷ ಸಹಾಯಧನ ಲಭ್ಯವಿದೆ. ಈ ಯೋಜನೆಯು 2020ರಲ್ಲಿ ಆರಂಭವಾಗಿ 2026 ರವರೆಗೆ ವಿಸ್ತರಣೆಯಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಸಾವಿರಾರು ಘಟಕಗಳು ಯಶಸ್ವಿಯಾಗಿ ನಡೆಯುತ್ತಿವೆ.

ಒಟ್ಟು ಸಹಾಯಧನ: ಯೋಜನಾ ವೆಚ್ಚದ 35% ಅಥವಾ ಗರಿಷ್ಠ ₹15 ಲಕ್ಷ ಆಗಿರುತ್ತದೆ. ಇದರಲ್ಲಿ ಕೇಂದ್ರ ಪಾಲು ₹10 ಲಕ್ಷದವರೆಗೆ 35% . ಉಳಿದಂತೆ ರಾಜ್ಯ ಪಾಲು ಹೆಚ್ಚುವರಿಯಾಗಿ ₹9 ಲಕ್ಷದವರೆಗೆ ಅಂದರೆ ಕರ್ನಾಟಕದ ವಿಶೇಷ ನೆರವು.
ಈ ಯೋಜನೆಗೆ  18 ವರ್ಷ ತುಂಬಿದ ಯಾವುದೇ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ರೈತರು, ಮಹಿಳೆಯರು, ಯುವಕರು, ಸ್ವ-ಸಹಾಯ ಗುಂಪುಗಳು , ರೈತ ಉತ್ಪಾದಕ ಸಂಘಗಳು, ಸಹಕಾರಿ ಸಂಘಗಳು, ಖಾಸಗಿ ಸಂಸ್ಥೆಗಳು ,  ಈಗಾಗಲೇ ಬ್ಯಾಂಕ್ ಸಾಲ ಪಡೆದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ

ಸಿರಿಧಾನ್ಯ ಸಂಸ್ಕರಣಾ ಘಟಕಗಳು (ರಾಗಿ, ಜೋಳ, ನವಣೆ, ಸಾಮೆ), ಗಾಣದ ಎಣ್ಣೆ (ಕೋಲ್ಡ್ ಪ್ರೆಸ್ಡ್ ಆಯಿಲ್) ಘಟಕಗಳು, ಬೆಲ್ಲ ಮತ್ತು ಸಕ್ಕರೆ ಆಧಾರಿತ ಉತ್ಪನ್ನ ಘಟಕಗಳು, ಮಸಾಲಾ ಪುಡಿ ಘಟಕಗಳು, ಹಣ್ಣು-ತರಕಾರಿ ಸಂಸ್ಕರಣಾ ಘಟಕಗಳು , ಬೇಕರಿ ಮತ್ತು ಸ್ನ್ಯಾಕ್ಸ್ ಘಟಕಗಳು, ಮೀನು, ಕೋಳಿ ಸಂಸ್ಕರಣಾ ಘಟಕಗಳು, ಸಾವಯವ ಉತ್ಪನ್ನ ಘಟಕಗಳಿಗೆ  ಸಹಾಯಧನ ಸಿಗುತ್ತದೆ.

ಕರ್ನಾಟಕದಲ್ಲಿ ಸುಮಾರು 22,000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದೆ. 7,000ಕ್ಕೂ ಹೆಚ್ಚು ಘಟಕಗಳಿಗೆ ಸಹಾಯಧನ ಮಂಜೂರಾತಿಯಾಗಿದೆ. ಇದರಲ್ಲಿ 1,800ಕ್ಕೂ ಹೆಚ್ಚು ಸಿರಿಧಾನ್ಯ ಘಟಕಗಳು, 800ಕ್ಕೂ ಹೆಚ್ಚು ಗಾಣದ ಎಣ್ಣೆ ಘಟಕಗಳು, 400ಕ್ಕೂ ಹೆಚ್ಚು ಬೆಲ್ಲ ಘಟಕಗಳು ಸೇರಿವೆ.

ಹೆಚ್ಚಿನ ಮಾಹಿತಿಗೆ  –  https://pmfme.mofpi.gov.in  ಅಥವಾ  ಕರ್ನಾಟಕ ಮಾಹಿತಿ: https://kappec.karnataka.gov.in

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

2 hours ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

5 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

6 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

14 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

15 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

16 hours ago