ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.
ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1 ರ ಅನುಪಾತದಲ್ಲಿ ಕಾಪರ್ಸಲ್ಫೇಟ್ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು ಎಂದು ಪ್ರಶ್ನಿಸುತ್ತಿದ್ದರು. ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.