ಅಡಿಕೆ ಬೆಳೆಗಾರರಿಗೆ ಪ್ರತೀ ವರ್ಷ ಕಾಡುವ ಸಮಸ್ಯೆ ಕೊಳೆರೋಗ. ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದಂತೆಯೇ ಅಡಿಕೆಗೆ ಕೊಳೆರೋಗ ಬಾಧಿಸುತ್ತದೆ. ಇದರ ನಿಯಂತ್ರಣಕ್ಕೆ ಅನೇಕ ವರ್ಷಗಳಿಂದಲೂ ಬೋರ್ಡೋ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಈಚೆಗೆ ಕೆಲವು ವರ್ಷಗಳಿಂದ ಹೊಸ ಪ್ರಯತ್ನ ನಡೆಯುತ್ತಿದೆ. ಕೆಲವು ಯಶಸ್ಸು ಕಾಣುತ್ತದೆ. ಇನ್ನೂ ಕೆಲವು ಔಷಧಗಳು ಪ್ರಯೋಗ ಹಂತದಲ್ಲಿ ಸೋಲುತ್ತದೆ.
ಹೀಗಾಗಿ ಅಡಿಕೆ ಬೆಳೆಗಾರರಿಗೆ ಕೊಳೆರೋಗಕ್ಕೆ ಈಗ ಯಾವುದು ಸೂಕ್ತ ಎನ್ನುವ ಗೊಂದಲ ಇತ್ತು. ಪಾರಂಪರಿಕವಾಗಿ ಈಗಲೂ 1:1 ರ ಅನುಪಾತದಲ್ಲಿ ಕಾಪರ್ಸಲ್ಫೇಟ್ ಹಾಗೂ ಸುಣ್ಣದ ಮಿಶ್ರಣವನ್ನು ಸಿಂಪಡಣೆ ಮಾಡುತ್ತಾರೆ. ಮಳೆಗಾಲದ ಆರಂಭದಲ್ಲಿ ಹಾಗೂ ನಂತರ ಪ್ರತೀ 30 ದಿನಗಳಿಗೊಮ್ಮೆ ಸಿಂಪಡಣೆ ಮಾಡುತ್ತಿದ್ದಾರೆ. ಆದರೆ ಈಚೆಗೆ ಅಡಿಕೆ ಬೆಳೆಗಾರರು ಬೋರ್ಡೋ ಬದಲು ಪರ್ಯಾಯ ಯಾವುದು ಎಂದು ಪ್ರಶ್ನಿಸುತ್ತಿದ್ದರು. ಇದೀಗ ಈ ಪ್ರಯೋಗದಲ್ಲಿ ಯಶಸ್ಸಾದ ಔಷಧ ಒಂದರ ಬಗ್ಗೆ ಸಿಪಿಸಿಆರ್ಐ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…