#SuccessStory | ಭತ್ತದ ಜೊತೆ ಸುಗಂಧರಾಜ ಹೂವಿನ ಬೆಳೆ | ಜೀವನಕ್ಕಾಗಿ ಅಪ್ಪನ ಕೃಷಿ, ಮಗನ ಗಾಣ |

July 5, 2023
12:15 PM
ಕೃಷಿ ಎನ್ನುವುದು ಕೇವಲ ಲಾಭ ಅಲ್ಲ, ಅದು ಜೀವನ ಖುಷಿ. ಸ್ವಂತಕ್ಕಾಗಿ ಬಳಸಿ ಉಳಿದದ್ದು ಮಾರುವುದು ಎನ್ನುವುದು ಒಂದು ನಂಬಿಕೆಯಾದರೆ. ಕೃಷಿಯೇ ಉದ್ಯಮ ಎನ್ನುವುದು ಇನ್ನೊಂದು ನಂಬಿಕೆ. ಇದೆರಡರೂ ಒಟ್ಟಾಗಿರುವ ಕತೆ ಇಲ್ಲಿದೆ..

ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಕೃಷಿಯನ್ನು ಜೀವನಕ್ಕಾಗಿ ನಂಬಿದ್ದರು. ಅದರಲ್ಲಿ ಲಾಭ, ನಷ್ಟದ ಮಾತೇ ಇರಲಿಲ್ಲ. ಆದರೆ ಈಗ ಹಾಗಲ್ಲ. ತನಗೆ ಮಾತ್ರವಲ್ಲ, ಅದೊಂದು ಉದ್ಯಮವಾಗಬೇಕು, ಭರಪೂರ ಬೆಳೆ ಬರಬೇಕು ಅನ್ನೊದೊಂದೇ ಕೃಷಿ ಎನ್ನಿಸಿಕೊಂಡಿದೆ. ಅಂದುಕೊಂಡಂತೆ ಕೃಷಿ ಕೈ ಹಿಡಿಯದಿದ್ದರೆ ಆತ್ಮಹತ್ಯೆ, ಕೃಷಿ ಮೇಲೆ ಜಿಗುಪ್ಸೆ ಹುಟ್ಟುತ್ತದೆ. ಇಂದಿನ ಅಪ್ಡೇಟ್‌ ಯುಗದಲ್ಲಿ ಕೃಷಿಯೂ ಅಪ್ಡೇಟ್‌ ಆಗಿದೆ.

ಇಲ್ಲೊಂದು ಮೈಸೂರಿನ ಕುಟುಂಬ ಜೀವನಕ್ಕಾಗಿ ಕೃಷಿ #Agriculture ಮಾಡುತ್ತಿದೆ. ಹಾಗೆ ಉಳಿದವರ ಹಿತಾಸಕ್ತಿಯನ್ನು ನೋಡುತ್ತಿದೆ.  ಒಂದೆಡೆ ಸೊಂಪಾಗಿ ಬೆಳೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋ ಭತ್ತದ ಹೊಲ, ಅದರ ಪಕ್ಕದಲ್ಲಿ ಮೊಗ್ಗು ಅರಳಿಸಿಕೊಂಡು ನಿಂತಿರೋ ಸುಗಂಧ ರಾಜ ಹೂಗಳು. ಇನ್ನೂ ಮನೆಯಲ್ಲಿ ನೈಸರ್ಗಿಕ ಗಾಣದ ಸದ್ದು. ಹೀಗೆ ಅಪ್ಪ-ಮಗನ ಜೋಡಿ  ಕೃಷಿ ಮಾಡಿ ಅದ್ಭುತ ಸಾಧನೆ ಮಾಡಿದ್ದಾರೆ

Advertisement
Advertisement
Advertisement
Advertisement

ಮೈಸೂರಿನ ಟಿ. ನರಸೀಪುರ ತಾಲೂಕಿನ ಕಯಂಬಳ್ಳಿಯ ರೈತ ಬಸಪ್ಪ ಅತೀ ಕಡಿಮೆ ಖರ್ಚಿನಲ್ಲಿ ಭತ್ತ ಬೆಳೆಯುತ್ತಾರೆ. ಇದಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ತರಬೇತಿ ಪಡೆದಿರುವ ಬಸಪ್ಪ ಅವರು ಊರಿನಲ್ಲಿ ಅದೇ ಪ್ರಕಾರ ನಾಟಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮಸ್ಥಳ ಸಂಸ್ಥೆಯ ಮಷಿನ್​ನಿಂದ ನಾಟಿ ಮಾಡಿಸುವ ಬಸಪ್ಪ ಅವರು, ಕೇವಲ ಎರಡೂವರೆ ಸಾವಿರ ರೂಪಾಯಿಯಲ್ಲಿ 2 ಎಕರೆಯಲ್ಲಿ ಭತ್ತ ಬೆಳೆಯುತ್ತಾರೆ. ಇನ್ನು ಸುಗಂಧರಾಜವನ್ನು ಅರ್ಧ ಎಕರೆಯಲ್ಲಿ ಬೆಳೆದಿರುವ ಬಸಪ್ಪ ಅವರು, ಅದ್ರಿಂದಾಗಿ ದಿನಕ್ಕೆ 6 ರಿಂದ 7 ಸಾವಿರ ಆದಾಯವನ್ನು ಪಡೆಯುತ್ತಿರುವುದು ವಿಶೇಷ. ನೇರವಾಗಿ ತಾವು ಬೆಳೆದ ಹೂಗಳನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಬಸಪ್ಪನವರು ಅಲ್ಲಿ ಮಾರಾಟ ಮಾಡುತ್ತಾರೆ. ಹೀಗೆ 3 ಎಕರೆ ಜಮೀನಿನಲ್ಲಿ ಉತ್ತಮ ಆದಾಯ ಪಡೆಯುತ್ತಿದ್ದಾರೆ.

Advertisement

ಗಾಣದಿಂದ ಎಣ್ಣೆ ತಯಾರಿ: ಬಸಪ್ಪ ಪುತ್ರ ಹರ್ಷ ಅವರು ಮನೆಯಲ್ಲಿಯೇ ಗಾಣದಿಂದ ಎಣ್ಣೆ ತಯಾರಿಸುತ್ತಾರೆ. ಎತ್ತುಗಳ ಸಹಾಯದಿಂದ ಮಾಡುವ ನೈಸರ್ಗಿಕ ಎಣ್ಣೆ ಗಾಣ ಇದಾಗಿದ್ದು, ಪಟ್ಟಣ ಪ್ರದೇಶದಿಂದಲೂ ಗ್ರಾಹಕರು ಹುಡುಕಿಕೊಂಡು ಇಲ್ಲಿಗೆ ಬರುತ್ತಾರೆ.ಕೊಬ್ಬರಿ, ಹರಳೆಣ್ಣೆ, ಕಡಲೆ ಎಣ್ಣೆ ಹೀಗೆ ಹಲವು ಬಗೆಯ ಎಣ್ಣೆಗಳನ್ನೂ ಇಲ್ಲಿ ತಯಾರಿಸಲಾಗುತ್ತೆ.  ಜನರು ಗುಣಮಟ್ಟ ನೋಡಿ ಎಣ್ಣೆ ಖರೀದಿಸುತ್ತಾರೆ. ಹೀಗೆ ಅಪ್ಪ, ಮಗನ ಜೋಡಿಯ ಈ ಕೃಷಿ ಸಾಧನೆ ಕಂಡು ಗ್ರಾಮದ ಹಲವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸೋ ಇವರು ಜೀವನಕ್ಕಾಗಿ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೆಮ್ಮದಿಯ ಜೀವನ ಕಂಡುಕೊಂಡಿದ್ದಾರೆ.

Advertisement
(ಕೃಪೆ : ಅಂತರ್ಜಾಲ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ
February 26, 2025
11:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror