ಇಲ್ಲೊಂದು ಮೈಸೂರಿನ ಕುಟುಂಬ ಜೀವನಕ್ಕಾಗಿ ಕೃಷಿ #Agriculture ಮಾಡುತ್ತಿದೆ. ಹಾಗೆ ಉಳಿದವರ ಹಿತಾಸಕ್ತಿಯನ್ನು ನೋಡುತ್ತಿದೆ. ಒಂದೆಡೆ ಸೊಂಪಾಗಿ ಬೆಳೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋ ಭತ್ತದ ಹೊಲ, ಅದರ ಪಕ್ಕದಲ್ಲಿ ಮೊಗ್ಗು ಅರಳಿಸಿಕೊಂಡು ನಿಂತಿರೋ ಸುಗಂಧ ರಾಜ ಹೂಗಳು. ಇನ್ನೂ ಮನೆಯಲ್ಲಿ ನೈಸರ್ಗಿಕ ಗಾಣದ ಸದ್ದು. ಹೀಗೆ ಅಪ್ಪ-ಮಗನ ಜೋಡಿ ಕೃಷಿ ಮಾಡಿ ಅದ್ಭುತ ಸಾಧನೆ ಮಾಡಿದ್ದಾರೆ
ಮೈಸೂರಿನ ಟಿ. ನರಸೀಪುರ ತಾಲೂಕಿನ ಕಯಂಬಳ್ಳಿಯ ರೈತ ಬಸಪ್ಪ ಅತೀ ಕಡಿಮೆ ಖರ್ಚಿನಲ್ಲಿ ಭತ್ತ ಬೆಳೆಯುತ್ತಾರೆ. ಇದಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ತರಬೇತಿ ಪಡೆದಿರುವ ಬಸಪ್ಪ ಅವರು ಊರಿನಲ್ಲಿ ಅದೇ ಪ್ರಕಾರ ನಾಟಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮಸ್ಥಳ ಸಂಸ್ಥೆಯ ಮಷಿನ್ನಿಂದ ನಾಟಿ ಮಾಡಿಸುವ ಬಸಪ್ಪ ಅವರು, ಕೇವಲ ಎರಡೂವರೆ ಸಾವಿರ ರೂಪಾಯಿಯಲ್ಲಿ 2 ಎಕರೆಯಲ್ಲಿ ಭತ್ತ ಬೆಳೆಯುತ್ತಾರೆ. ಇನ್ನು ಸುಗಂಧರಾಜವನ್ನು ಅರ್ಧ ಎಕರೆಯಲ್ಲಿ ಬೆಳೆದಿರುವ ಬಸಪ್ಪ ಅವರು, ಅದ್ರಿಂದಾಗಿ ದಿನಕ್ಕೆ 6 ರಿಂದ 7 ಸಾವಿರ ಆದಾಯವನ್ನು ಪಡೆಯುತ್ತಿರುವುದು ವಿಶೇಷ. ನೇರವಾಗಿ ತಾವು ಬೆಳೆದ ಹೂಗಳನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಬಸಪ್ಪನವರು ಅಲ್ಲಿ ಮಾರಾಟ ಮಾಡುತ್ತಾರೆ. ಹೀಗೆ 3 ಎಕರೆ ಜಮೀನಿನಲ್ಲಿ ಉತ್ತಮ ಆದಾಯ ಪಡೆಯುತ್ತಿದ್ದಾರೆ.
ಗಾಣದಿಂದ ಎಣ್ಣೆ ತಯಾರಿ: ಬಸಪ್ಪ ಪುತ್ರ ಹರ್ಷ ಅವರು ಮನೆಯಲ್ಲಿಯೇ ಗಾಣದಿಂದ ಎಣ್ಣೆ ತಯಾರಿಸುತ್ತಾರೆ. ಎತ್ತುಗಳ ಸಹಾಯದಿಂದ ಮಾಡುವ ನೈಸರ್ಗಿಕ ಎಣ್ಣೆ ಗಾಣ ಇದಾಗಿದ್ದು, ಪಟ್ಟಣ ಪ್ರದೇಶದಿಂದಲೂ ಗ್ರಾಹಕರು ಹುಡುಕಿಕೊಂಡು ಇಲ್ಲಿಗೆ ಬರುತ್ತಾರೆ.ಕೊಬ್ಬರಿ, ಹರಳೆಣ್ಣೆ, ಕಡಲೆ ಎಣ್ಣೆ ಹೀಗೆ ಹಲವು ಬಗೆಯ ಎಣ್ಣೆಗಳನ್ನೂ ಇಲ್ಲಿ ತಯಾರಿಸಲಾಗುತ್ತೆ. ಜನರು ಗುಣಮಟ್ಟ ನೋಡಿ ಎಣ್ಣೆ ಖರೀದಿಸುತ್ತಾರೆ. ಹೀಗೆ ಅಪ್ಪ, ಮಗನ ಜೋಡಿಯ ಈ ಕೃಷಿ ಸಾಧನೆ ಕಂಡು ಗ್ರಾಮದ ಹಲವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸೋ ಇವರು ಜೀವನಕ್ಕಾಗಿ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೆಮ್ಮದಿಯ ಜೀವನ ಕಂಡುಕೊಂಡಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…