Advertisement
ಸುದ್ದಿಗಳು

#SuccessStory | ಭತ್ತದ ಜೊತೆ ಸುಗಂಧರಾಜ ಹೂವಿನ ಬೆಳೆ | ಜೀವನಕ್ಕಾಗಿ ಅಪ್ಪನ ಕೃಷಿ, ಮಗನ ಗಾಣ |

Share

ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಕೃಷಿಯನ್ನು ಜೀವನಕ್ಕಾಗಿ ನಂಬಿದ್ದರು. ಅದರಲ್ಲಿ ಲಾಭ, ನಷ್ಟದ ಮಾತೇ ಇರಲಿಲ್ಲ. ಆದರೆ ಈಗ ಹಾಗಲ್ಲ. ತನಗೆ ಮಾತ್ರವಲ್ಲ, ಅದೊಂದು ಉದ್ಯಮವಾಗಬೇಕು, ಭರಪೂರ ಬೆಳೆ ಬರಬೇಕು ಅನ್ನೊದೊಂದೇ ಕೃಷಿ ಎನ್ನಿಸಿಕೊಂಡಿದೆ. ಅಂದುಕೊಂಡಂತೆ ಕೃಷಿ ಕೈ ಹಿಡಿಯದಿದ್ದರೆ ಆತ್ಮಹತ್ಯೆ, ಕೃಷಿ ಮೇಲೆ ಜಿಗುಪ್ಸೆ ಹುಟ್ಟುತ್ತದೆ. ಇಂದಿನ ಅಪ್ಡೇಟ್‌ ಯುಗದಲ್ಲಿ ಕೃಷಿಯೂ ಅಪ್ಡೇಟ್‌ ಆಗಿದೆ.

ಇಲ್ಲೊಂದು ಮೈಸೂರಿನ ಕುಟುಂಬ ಜೀವನಕ್ಕಾಗಿ ಕೃಷಿ #Agriculture ಮಾಡುತ್ತಿದೆ. ಹಾಗೆ ಉಳಿದವರ ಹಿತಾಸಕ್ತಿಯನ್ನು ನೋಡುತ್ತಿದೆ.  ಒಂದೆಡೆ ಸೊಂಪಾಗಿ ಬೆಳೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋ ಭತ್ತದ ಹೊಲ, ಅದರ ಪಕ್ಕದಲ್ಲಿ ಮೊಗ್ಗು ಅರಳಿಸಿಕೊಂಡು ನಿಂತಿರೋ ಸುಗಂಧ ರಾಜ ಹೂಗಳು. ಇನ್ನೂ ಮನೆಯಲ್ಲಿ ನೈಸರ್ಗಿಕ ಗಾಣದ ಸದ್ದು. ಹೀಗೆ ಅಪ್ಪ-ಮಗನ ಜೋಡಿ  ಕೃಷಿ ಮಾಡಿ ಅದ್ಭುತ ಸಾಧನೆ ಮಾಡಿದ್ದಾರೆ

Advertisement
Advertisement

ಮೈಸೂರಿನ ಟಿ. ನರಸೀಪುರ ತಾಲೂಕಿನ ಕಯಂಬಳ್ಳಿಯ ರೈತ ಬಸಪ್ಪ ಅತೀ ಕಡಿಮೆ ಖರ್ಚಿನಲ್ಲಿ ಭತ್ತ ಬೆಳೆಯುತ್ತಾರೆ. ಇದಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ತರಬೇತಿ ಪಡೆದಿರುವ ಬಸಪ್ಪ ಅವರು ಊರಿನಲ್ಲಿ ಅದೇ ಪ್ರಕಾರ ನಾಟಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮಸ್ಥಳ ಸಂಸ್ಥೆಯ ಮಷಿನ್​ನಿಂದ ನಾಟಿ ಮಾಡಿಸುವ ಬಸಪ್ಪ ಅವರು, ಕೇವಲ ಎರಡೂವರೆ ಸಾವಿರ ರೂಪಾಯಿಯಲ್ಲಿ 2 ಎಕರೆಯಲ್ಲಿ ಭತ್ತ ಬೆಳೆಯುತ್ತಾರೆ. ಇನ್ನು ಸುಗಂಧರಾಜವನ್ನು ಅರ್ಧ ಎಕರೆಯಲ್ಲಿ ಬೆಳೆದಿರುವ ಬಸಪ್ಪ ಅವರು, ಅದ್ರಿಂದಾಗಿ ದಿನಕ್ಕೆ 6 ರಿಂದ 7 ಸಾವಿರ ಆದಾಯವನ್ನು ಪಡೆಯುತ್ತಿರುವುದು ವಿಶೇಷ. ನೇರವಾಗಿ ತಾವು ಬೆಳೆದ ಹೂಗಳನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಬಸಪ್ಪನವರು ಅಲ್ಲಿ ಮಾರಾಟ ಮಾಡುತ್ತಾರೆ. ಹೀಗೆ 3 ಎಕರೆ ಜಮೀನಿನಲ್ಲಿ ಉತ್ತಮ ಆದಾಯ ಪಡೆಯುತ್ತಿದ್ದಾರೆ.

Advertisement

ಗಾಣದಿಂದ ಎಣ್ಣೆ ತಯಾರಿ: ಬಸಪ್ಪ ಪುತ್ರ ಹರ್ಷ ಅವರು ಮನೆಯಲ್ಲಿಯೇ ಗಾಣದಿಂದ ಎಣ್ಣೆ ತಯಾರಿಸುತ್ತಾರೆ. ಎತ್ತುಗಳ ಸಹಾಯದಿಂದ ಮಾಡುವ ನೈಸರ್ಗಿಕ ಎಣ್ಣೆ ಗಾಣ ಇದಾಗಿದ್ದು, ಪಟ್ಟಣ ಪ್ರದೇಶದಿಂದಲೂ ಗ್ರಾಹಕರು ಹುಡುಕಿಕೊಂಡು ಇಲ್ಲಿಗೆ ಬರುತ್ತಾರೆ.ಕೊಬ್ಬರಿ, ಹರಳೆಣ್ಣೆ, ಕಡಲೆ ಎಣ್ಣೆ ಹೀಗೆ ಹಲವು ಬಗೆಯ ಎಣ್ಣೆಗಳನ್ನೂ ಇಲ್ಲಿ ತಯಾರಿಸಲಾಗುತ್ತೆ.  ಜನರು ಗುಣಮಟ್ಟ ನೋಡಿ ಎಣ್ಣೆ ಖರೀದಿಸುತ್ತಾರೆ. ಹೀಗೆ ಅಪ್ಪ, ಮಗನ ಜೋಡಿಯ ಈ ಕೃಷಿ ಸಾಧನೆ ಕಂಡು ಗ್ರಾಮದ ಹಲವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸೋ ಇವರು ಜೀವನಕ್ಕಾಗಿ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೆಮ್ಮದಿಯ ಜೀವನ ಕಂಡುಕೊಂಡಿದ್ದಾರೆ.

Advertisement
(ಕೃಪೆ : ಅಂತರ್ಜಾಲ )
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ : ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

2 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ : ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

3 hours ago

ಭಾರತದಲ್ಲಿ ಕೃಷಿ ಅರಣ್ಯ : ಆದ್ಯತೆ ಮತ್ತು ಪರಿಸರಕ್ಕಾಗುವ ಲಾಭ

ಕೃಷಿ ಅರಣ್ಯಶಾಸ್ತ್ರವು(Agroforestry) ಸಾಂಪ್ರದಾಯಿಕ(Cultural) ಮತ್ತು ಆಧುನಿಕ ಭೂ-ಬಳಕೆಯ(Modern land-use) ವ್ಯವಸ್ಥೆಗಳನ್ನು ವಿವರಿಸುತ್ತದೆ, ಅಲ್ಲಿ ಮರದ…

3 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ : ಕೈ ತೋಟಗಳಲ್ಲಿ ಸಿಗುವ ಸುಲಭೌಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

3 hours ago

ಕರಾವಳಿ ಭಾಗದಲ್ಲಿ ಭಾರಿ ಮಳೆ : ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್: ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

ಕಳೆದ ವರ್ಷ ಮುಂಗಾರು ಮಳೆ(Mansoon Rain) ಕೊಟ್ಟ ಹಿನ್ನೆಲೆ, ಈ ಬಾರಿ ರಾಜ್ಯದ್ಯಂತ…

3 hours ago