ಇಲ್ಲೊಂದು ಮೈಸೂರಿನ ಕುಟುಂಬ ಜೀವನಕ್ಕಾಗಿ ಕೃಷಿ #Agriculture ಮಾಡುತ್ತಿದೆ. ಹಾಗೆ ಉಳಿದವರ ಹಿತಾಸಕ್ತಿಯನ್ನು ನೋಡುತ್ತಿದೆ. ಒಂದೆಡೆ ಸೊಂಪಾಗಿ ಬೆಳೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋ ಭತ್ತದ ಹೊಲ, ಅದರ ಪಕ್ಕದಲ್ಲಿ ಮೊಗ್ಗು ಅರಳಿಸಿಕೊಂಡು ನಿಂತಿರೋ ಸುಗಂಧ ರಾಜ ಹೂಗಳು. ಇನ್ನೂ ಮನೆಯಲ್ಲಿ ನೈಸರ್ಗಿಕ ಗಾಣದ ಸದ್ದು. ಹೀಗೆ ಅಪ್ಪ-ಮಗನ ಜೋಡಿ ಕೃಷಿ ಮಾಡಿ ಅದ್ಭುತ ಸಾಧನೆ ಮಾಡಿದ್ದಾರೆ
ಮೈಸೂರಿನ ಟಿ. ನರಸೀಪುರ ತಾಲೂಕಿನ ಕಯಂಬಳ್ಳಿಯ ರೈತ ಬಸಪ್ಪ ಅತೀ ಕಡಿಮೆ ಖರ್ಚಿನಲ್ಲಿ ಭತ್ತ ಬೆಳೆಯುತ್ತಾರೆ. ಇದಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ತರಬೇತಿ ಪಡೆದಿರುವ ಬಸಪ್ಪ ಅವರು ಊರಿನಲ್ಲಿ ಅದೇ ಪ್ರಕಾರ ನಾಟಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮಸ್ಥಳ ಸಂಸ್ಥೆಯ ಮಷಿನ್ನಿಂದ ನಾಟಿ ಮಾಡಿಸುವ ಬಸಪ್ಪ ಅವರು, ಕೇವಲ ಎರಡೂವರೆ ಸಾವಿರ ರೂಪಾಯಿಯಲ್ಲಿ 2 ಎಕರೆಯಲ್ಲಿ ಭತ್ತ ಬೆಳೆಯುತ್ತಾರೆ. ಇನ್ನು ಸುಗಂಧರಾಜವನ್ನು ಅರ್ಧ ಎಕರೆಯಲ್ಲಿ ಬೆಳೆದಿರುವ ಬಸಪ್ಪ ಅವರು, ಅದ್ರಿಂದಾಗಿ ದಿನಕ್ಕೆ 6 ರಿಂದ 7 ಸಾವಿರ ಆದಾಯವನ್ನು ಪಡೆಯುತ್ತಿರುವುದು ವಿಶೇಷ. ನೇರವಾಗಿ ತಾವು ಬೆಳೆದ ಹೂಗಳನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಬಸಪ್ಪನವರು ಅಲ್ಲಿ ಮಾರಾಟ ಮಾಡುತ್ತಾರೆ. ಹೀಗೆ 3 ಎಕರೆ ಜಮೀನಿನಲ್ಲಿ ಉತ್ತಮ ಆದಾಯ ಪಡೆಯುತ್ತಿದ್ದಾರೆ.
ಗಾಣದಿಂದ ಎಣ್ಣೆ ತಯಾರಿ: ಬಸಪ್ಪ ಪುತ್ರ ಹರ್ಷ ಅವರು ಮನೆಯಲ್ಲಿಯೇ ಗಾಣದಿಂದ ಎಣ್ಣೆ ತಯಾರಿಸುತ್ತಾರೆ. ಎತ್ತುಗಳ ಸಹಾಯದಿಂದ ಮಾಡುವ ನೈಸರ್ಗಿಕ ಎಣ್ಣೆ ಗಾಣ ಇದಾಗಿದ್ದು, ಪಟ್ಟಣ ಪ್ರದೇಶದಿಂದಲೂ ಗ್ರಾಹಕರು ಹುಡುಕಿಕೊಂಡು ಇಲ್ಲಿಗೆ ಬರುತ್ತಾರೆ.ಕೊಬ್ಬರಿ, ಹರಳೆಣ್ಣೆ, ಕಡಲೆ ಎಣ್ಣೆ ಹೀಗೆ ಹಲವು ಬಗೆಯ ಎಣ್ಣೆಗಳನ್ನೂ ಇಲ್ಲಿ ತಯಾರಿಸಲಾಗುತ್ತೆ. ಜನರು ಗುಣಮಟ್ಟ ನೋಡಿ ಎಣ್ಣೆ ಖರೀದಿಸುತ್ತಾರೆ. ಹೀಗೆ ಅಪ್ಪ, ಮಗನ ಜೋಡಿಯ ಈ ಕೃಷಿ ಸಾಧನೆ ಕಂಡು ಗ್ರಾಮದ ಹಲವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸೋ ಇವರು ಜೀವನಕ್ಕಾಗಿ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೆಮ್ಮದಿಯ ಜೀವನ ಕಂಡುಕೊಂಡಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…