Advertisement
ಸುದ್ದಿಗಳು

#SuccessStory | ಭತ್ತದ ಜೊತೆ ಸುಗಂಧರಾಜ ಹೂವಿನ ಬೆಳೆ | ಜೀವನಕ್ಕಾಗಿ ಅಪ್ಪನ ಕೃಷಿ, ಮಗನ ಗಾಣ |

Share

ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಕೃಷಿಯನ್ನು ಜೀವನಕ್ಕಾಗಿ ನಂಬಿದ್ದರು. ಅದರಲ್ಲಿ ಲಾಭ, ನಷ್ಟದ ಮಾತೇ ಇರಲಿಲ್ಲ. ಆದರೆ ಈಗ ಹಾಗಲ್ಲ. ತನಗೆ ಮಾತ್ರವಲ್ಲ, ಅದೊಂದು ಉದ್ಯಮವಾಗಬೇಕು, ಭರಪೂರ ಬೆಳೆ ಬರಬೇಕು ಅನ್ನೊದೊಂದೇ ಕೃಷಿ ಎನ್ನಿಸಿಕೊಂಡಿದೆ. ಅಂದುಕೊಂಡಂತೆ ಕೃಷಿ ಕೈ ಹಿಡಿಯದಿದ್ದರೆ ಆತ್ಮಹತ್ಯೆ, ಕೃಷಿ ಮೇಲೆ ಜಿಗುಪ್ಸೆ ಹುಟ್ಟುತ್ತದೆ. ಇಂದಿನ ಅಪ್ಡೇಟ್‌ ಯುಗದಲ್ಲಿ ಕೃಷಿಯೂ ಅಪ್ಡೇಟ್‌ ಆಗಿದೆ.

ಇಲ್ಲೊಂದು ಮೈಸೂರಿನ ಕುಟುಂಬ ಜೀವನಕ್ಕಾಗಿ ಕೃಷಿ #Agriculture ಮಾಡುತ್ತಿದೆ. ಹಾಗೆ ಉಳಿದವರ ಹಿತಾಸಕ್ತಿಯನ್ನು ನೋಡುತ್ತಿದೆ.  ಒಂದೆಡೆ ಸೊಂಪಾಗಿ ಬೆಳೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರೋ ಭತ್ತದ ಹೊಲ, ಅದರ ಪಕ್ಕದಲ್ಲಿ ಮೊಗ್ಗು ಅರಳಿಸಿಕೊಂಡು ನಿಂತಿರೋ ಸುಗಂಧ ರಾಜ ಹೂಗಳು. ಇನ್ನೂ ಮನೆಯಲ್ಲಿ ನೈಸರ್ಗಿಕ ಗಾಣದ ಸದ್ದು. ಹೀಗೆ ಅಪ್ಪ-ಮಗನ ಜೋಡಿ  ಕೃಷಿ ಮಾಡಿ ಅದ್ಭುತ ಸಾಧನೆ ಮಾಡಿದ್ದಾರೆ

ಮೈಸೂರಿನ ಟಿ. ನರಸೀಪುರ ತಾಲೂಕಿನ ಕಯಂಬಳ್ಳಿಯ ರೈತ ಬಸಪ್ಪ ಅತೀ ಕಡಿಮೆ ಖರ್ಚಿನಲ್ಲಿ ಭತ್ತ ಬೆಳೆಯುತ್ತಾರೆ. ಇದಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ತರಬೇತಿ ಪಡೆದಿರುವ ಬಸಪ್ಪ ಅವರು ಊರಿನಲ್ಲಿ ಅದೇ ಪ್ರಕಾರ ನಾಟಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮಸ್ಥಳ ಸಂಸ್ಥೆಯ ಮಷಿನ್​ನಿಂದ ನಾಟಿ ಮಾಡಿಸುವ ಬಸಪ್ಪ ಅವರು, ಕೇವಲ ಎರಡೂವರೆ ಸಾವಿರ ರೂಪಾಯಿಯಲ್ಲಿ 2 ಎಕರೆಯಲ್ಲಿ ಭತ್ತ ಬೆಳೆಯುತ್ತಾರೆ. ಇನ್ನು ಸುಗಂಧರಾಜವನ್ನು ಅರ್ಧ ಎಕರೆಯಲ್ಲಿ ಬೆಳೆದಿರುವ ಬಸಪ್ಪ ಅವರು, ಅದ್ರಿಂದಾಗಿ ದಿನಕ್ಕೆ 6 ರಿಂದ 7 ಸಾವಿರ ಆದಾಯವನ್ನು ಪಡೆಯುತ್ತಿರುವುದು ವಿಶೇಷ. ನೇರವಾಗಿ ತಾವು ಬೆಳೆದ ಹೂಗಳನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಬಸಪ್ಪನವರು ಅಲ್ಲಿ ಮಾರಾಟ ಮಾಡುತ್ತಾರೆ. ಹೀಗೆ 3 ಎಕರೆ ಜಮೀನಿನಲ್ಲಿ ಉತ್ತಮ ಆದಾಯ ಪಡೆಯುತ್ತಿದ್ದಾರೆ.

ಗಾಣದಿಂದ ಎಣ್ಣೆ ತಯಾರಿ: ಬಸಪ್ಪ ಪುತ್ರ ಹರ್ಷ ಅವರು ಮನೆಯಲ್ಲಿಯೇ ಗಾಣದಿಂದ ಎಣ್ಣೆ ತಯಾರಿಸುತ್ತಾರೆ. ಎತ್ತುಗಳ ಸಹಾಯದಿಂದ ಮಾಡುವ ನೈಸರ್ಗಿಕ ಎಣ್ಣೆ ಗಾಣ ಇದಾಗಿದ್ದು, ಪಟ್ಟಣ ಪ್ರದೇಶದಿಂದಲೂ ಗ್ರಾಹಕರು ಹುಡುಕಿಕೊಂಡು ಇಲ್ಲಿಗೆ ಬರುತ್ತಾರೆ.ಕೊಬ್ಬರಿ, ಹರಳೆಣ್ಣೆ, ಕಡಲೆ ಎಣ್ಣೆ ಹೀಗೆ ಹಲವು ಬಗೆಯ ಎಣ್ಣೆಗಳನ್ನೂ ಇಲ್ಲಿ ತಯಾರಿಸಲಾಗುತ್ತೆ.  ಜನರು ಗುಣಮಟ್ಟ ನೋಡಿ ಎಣ್ಣೆ ಖರೀದಿಸುತ್ತಾರೆ. ಹೀಗೆ ಅಪ್ಪ, ಮಗನ ಜೋಡಿಯ ಈ ಕೃಷಿ ಸಾಧನೆ ಕಂಡು ಗ್ರಾಮದ ಹಲವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸೋ ಇವರು ಜೀವನಕ್ಕಾಗಿ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ನೆಮ್ಮದಿಯ ಜೀವನ ಕಂಡುಕೊಂಡಿದ್ದಾರೆ.

(ಕೃಪೆ : ಅಂತರ್ಜಾಲ )
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

20 minutes ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

1 hour ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

10 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago