ಸಾಧನೆ ಎನ್ನುವುದು ಏಕಾಏಕಿ ಸಿಗುವ ಫಲವಲ್ಲ. ನಮಗೆ ಕಾಣುವುದು ಫಲಿತಾಂಶಗಳು ಮಾತ್ರಾ. ಅದರ ಹಿಂದಿನ ಶ್ರಮ ಕಾಣದು. “ಅವನು ಮಾಡಿದ, ನಾನೂ ಮಾಡುವೆ” ಎಂದರೆ ಸಾಧ್ಯವಿಲ್ಲ. ಈ ಸಾಧನೆಯು ಪ್ರತಿದಿನದ ಸಣ್ಣ ಪ್ರಯತ್ನಗಳ, ಸೋಲುಗಳಿಂದ ಕಲಿತ ಪಾಠಗಳು ಮತ್ತು ಕೈ ಬಿಡದ ಮನೋಭಾವದ ಫಲ. ಎಲ್ಲರಿಗೂ ಯಶಸ್ಸು ಒಂದೇ ರೀತಿಯಲ್ಲಿ ಬರುವುದಿಲ್ಲ; ಆದರೆ ಪ್ರಯತ್ನ ಮಾಡುವ ಹಕ್ಕು ಎಲ್ಲರಿಗೂ ಸಮಾನ. ಕೆಲವೊಮ್ಮೆ ನಮ್ಮ ಶ್ರಮಕ್ಕೆ ತಕ್ಷಣ ಫಲ ಸಿಗದಿರಬಹುದು. ಆದರೆ ಆ ಕ್ಷಣಗಳೇ ನಮ್ಮೊಳಗಿನ ಶಕ್ತಿಯನ್ನು ಹೆಚ್ಚುಗೊಳಿಸುತ್ತವೆ. ನಿಂತುಬಿಟ್ಟರೆ ಸಾಧನೆ ಇಲ್ಲ; ನಡೆಯುತ್ತಲೇ ಇದ್ದರೆ ದಾರಿ ತಾನಾಗಿಯೇ ಕಾಣುತ್ತದೆ.
ಭಗವದ್ಗೀತೆ ಹೇಳುವಂತೆ, “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ” ಅಂದರೆ, ನಿನಗೆ ಹಕ್ಕಿರುವುದು ಕರ್ಮಕ್ಕೆ ಮಾತ್ರ, ಫಲದ ಮೇಲೆ ಅಲ್ಲ. ಫಲದ ಬಗ್ಗೆ ಅತಿಯಾಗಿ ಚಿಂತಿಸದೆ, ಇಂದಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನೆರವೇರಿಸಿದಾಗ ಯಶಸ್ಸು ತನ್ನ ಸಮಯಕ್ಕೆ ತಾನೇ ಬರುತ್ತದೆ. ಪ್ರತಿದಿನದ ಶ್ರಮವೇ ನಾಳೆಯ ಸಾಧನೆಗೆ ಬೀಜ. ಇಂದು ನಂಬಿಕೆ ಇಟ್ಟು ಮಾಡಿದ ಕೆಲಸವೇ, ನಾಳೆ ಬದುಕಿಗೆ ಹೊಸ ಅರ್ಥ ಕೊಡುತ್ತದೆ. ಅದರ ಜೊತೆಗೇ, ಇನ್ನೊಬ್ಬನ ಸಾಧನೆಗೂ ಅಡ್ಡಿಯಾಗಬೇಡ, ಮರುಗಬೇಡ, ಮತ್ಸರವೂ ಪಡಬೇಡ. ಸಾಧ್ಯವಾದರೆ ಬೆನ್ನುತಟ್ಟು, ಸಾಧನೆಯ ದಾರಿಯನ್ನು ತಿಳಿ, ಅದೂ ಅನುಭವ ಕೊಡುತ್ತದೆ… ಶುಭದಿನ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…